ಮಹಾ ಮೃತ್ಯುಂಜಯ ಸ್ತೋತ್ರಮ್



ರುದ್ರಂ ಪಶುಪತಿಂ ಸ್ಥಾಣುಂ ನೀಲಕಂಠಂ ಉಮಾಪತಿಂ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೧||
    ರುದ್ರನನ್ನನು,ಪಶುಪತಿಯನ್ನು,ಸ್ಥಿರರೂಪೀಶಿವನನ್ನು,ನೀಲಕಂಠನನ್ನು, ಉಮಾಪತಿಯನ್ನು,ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಕಾಲಕಂಠಂ ಕಾಲಮೂರ್ತಿಂ ಕಾಲಾಗ್ನಿಂ ಕಾಲನಾಶನಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೨||
    ಕಾಲಕಂಠನನ್ನು,ಕಾಲಮೂರ್ತಿಯನ್ನು,ಕಾಲಾಗ್ನಿಯನ್ನು,ಕಾಲನಾಶಕನನ್ನು ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ವಾಮದೇವಂ ಮಹಾದೇವಂ ಲೋಕನಾಥಂ ಜಗದ್ಗುರುಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೩||
    ವಾಮದೇವನನ್ನು,ಲೋಕನಾಥನನ್ನು,ಜಗದ್ಗುರುವನ್ನು,ದೇವದೇವನಾದ ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ದೇವದೇವಂ ಜಗನ್ನಾಥಂ ದೇವೇಶಂ ವೃಷಭಧ್ವಜಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೪||
    ದೇವದೇವನಾದಜಗನ್ನಾಥನನ್ನುದೇವೇಶನಾದ ಪರಮಶಿವನನ್ನು,ವೃಷಭಧ್ವಜನನ್ನು,ಮಹಾದೇವನನ್ನುನಾನುಶಿರಸಾನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಗಂಗಾಧರಂ ಮಹಾದೇವಂ ಶಂಕರಂ ಶೂಲಪಾಣಿನಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೫||
    ಗಂಗಾಧರನನ್ನು,ಶಂಕರನನ್ನು, ಶೂಲಪಾಣಿಯನ್ನು ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಭಸ್ಮೋದ್ಧೂಲಿತಸರ್ವಾಂಗಂ ನಾನಾಹರ್ಣಭೂಷಿತಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೬||
    ವಿಭೂತಿಯ ಕಣದಿಂದ ಸರ್ವಾಂಗವೂ ಲೇಪಿತನಾದವನ,ಮತ್ತು ವಿವಿಧಾಭರಣಗಳನ್ನು ಧರಿಸಿಕೊಂಡಿರುವ ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಆನಂದಂ ಪರಮಾನಂದಂ ಕೈವಲ್ಯಪದಗಾಮಿನಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೭||
    ಆನಂದ ಸ್ವರೂಪನೂ,ಪರಮಾನಂದಕಾರಕನೂ, ಕೈವಲ್ಯಕ್ಕೆ ಹಾದಿ ತೋರುವವನೂ ಆಗಿರುವ ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಸ್ವರ್ಗಾಪವರ್ಗದಾತಾರಂ ಸೃಷ್ಟಿಸ್ಥಿತ್ಯಂತಕಾರಿಣಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೮||
    ಸ್ವರ್ಗಸುಖದಾಯಕನೂ,ಸೃಷ್ಟಿ ಸ್ಥಿತಿ ಲಯಕಾರಕನೂ ಆಗಿರುವ ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಪ್ರಲಯಸ್ಥಿತಿಸಂಹಾರಮಾದಿಕರ್ತಾರಮೀಶ್ವರಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||೯||
    ಪ್ರಲಯ,ಸೃಷ್ಟಿ ನಾಶಗಳಿಗೆ ಕಾರಣನಾಗಿರುವ ಮಹಾದೇವನನ್ನು ನಾನು ಶಿರಸಾ ನಮಸ್ಕರಿಸುವೆ.ಮೃತ್ಯು ನನಗೇನು ಮಾಡಲು ಸಾಧ್ಯ?

ಸತ್ಯಂ ಸತ್ಯಂ ಪುನ: ಸತ್ಯಮುದ್ಧೃತ್ಯ ಭುಜಮುಚ್ಯತೇ |
ವೇದ ಶಾಸ್ತ್ರಾತ್ ಪರಂ ನಾಸ್ತಿ ನ ದೇವ: ಶಂಕರಾತ್ ಪರ: ||೧೦||
    ವೇದಶಾಸ್ತ್ರಗಳಿಂದ ಉತ್ಕೃಷ್ಠವಾಗಿರುವ ತತ್ವಗಳು ಬೇರಾವುದೂ ಇಲ್ಲ.ಅದೇ ರೀತಿಯಾಗಿ ಶಂಕರನಿಗಿಂತ ಬೇರೆಯಾದ ಉನ್ನತ ದೇವ ಇನ್ನೊಬ್ಬನಿಲ್ಲ.

ಮಾರ್ಕಾಂಡೇಯಕೃತಂ ಸ್ತೋತ್ರಂ ಯ: ಪಠೇಚ್ಛಿವಸನ್ನಿಧೌ |
ತಸ್ಯ ಮೃತ್ಯುಭಯಂ ನಾಸ್ತಿ ಅಗ್ನಿಚೋರಭಯಂ ನ ಹಿ ||೧೧||
    ಮಾರ್ಕಾಂಡೇಯ ಮಹರ್ಷಿಗಳಿಂದ ರಚಿಸಲ್ಪಟ್ಟ ಈ ಸ್ತೋತ್ರವನ್ನು ಯಾರು ಶಿವ ಸನ್ನಿಧಿಯಲ್ಲಿ ಭಕ್ತಿ ಶ್ರದ್ಧಾಪುರಸರವಾಗಿ ಪಠಿಸುವರೋ ಅಂತವರ ಮೃತ್ಯುಭೀತಿಯು ನಾಶವಾಗುವುದಲ್ಲದೆ ಅಗ್ನಿ ಭಯ,ಚೋರಭಯ ಇತ್ಯಾದಿಯಾದ ನೈಸರ್ಗಿಕ ವಿಕೋಪಗಳಿಂದ ಯಾವ ಭೀತಿಯೂ ಇರುವುದಿಲ್ಲ.

|| ಇತಿ ಶ್ರೀ ಮಹಾ ಮೃತ್ಯುಂಜಯ ಸ್ತೋತ್ರಮ್ ||

Comments

Popular posts from this blog

'ಓಂ ಗಂ ಗಣಪತಯೇ ನಮಃ'

ಶ್ರೀಮದ್ವೇಂಕಟೇಶ ಮಹಾತ್ಮೇ ಶ್ರೀ ವೇಂಕಟೇಶ ಸ್ತೋತ್ರಂ

ಕನಕದಾಸರ ಮೋಹನತರಂಗಿಣಿ