ಲಲಿತಾ ತ್ರಿಶತೀ - 19 ಓಂ ಕಾರಯಿತ್ರ್ಯೈ ನಮಃ


ಸ್ರಷ್ಟವ್ಯ ವಸ್ತುವಿನ ಸೃಷ್ಟಿ ವ್ಯಾಪಾರವು ಹುಟ್ಟಲು ಕಾರಣವಾದ ಪೂರ್ವ ಕರ್ಮೋದ್ಬೋಧಕವಾದ ವಿಧಿಪ್ರತ್ಯಯ ರೂಪವಾದ ಶಬ್ದ ಧರ್ಮ ಅಥವಾ ಶಾಸ್ತ್ರ ಸಂಕೇತದಂತೆ ವಿಧಿ ಭಾವನೆಯು ಕಾರ್ಯವನ್ನು ಮಾಡಿಸುವುದು. ಆದರೆ ಅಚೇತನ ಶಬ್ದಗಳಿಎ ಅಜ್ಞಾಪಕತ್ವ ಧರ್ಮವು ಅಸಂಗತವಾದ್ದರಿಂದ ಶಬ್ದಧಿಷ್ಟಾನ ಚೈತನ್ಯ ರೂಪದಿಂದ ವೇದಗಳಿಗೆ ಕಾರಯಿತೃತ್ವವು ಬರುವುದು. "ಸರ್ವೇ ವೇದ ಯತ್ರೈಕಂ ಭವಂತಿ" ಎಂಬ ಶ್ರುತಿ ಪ್ರಮಾಣದಿಂದ ವೇದಗಳು ಆತ್ಮ ಸ್ವರೂಪವಾಗಿವೆ. ಆದ್ದರಿಂದ ಸ್ವಪ್ರಕಾಶಗಳಾದ ವೇದಗಳು ತಮ್ಮ ಅರ್ಥವನ್ನೂ ಮತ್ತು ತನ್ನ ಅರ್ಥಜ್ಞಾನದಲ್ಲಿ ಪ್ರಾಮಾಣ್ಯವನ್ನೂ ಪ್ರಕಾಶಪಡಿಸಿ ಚೈತನ್ಯ ರೂಪದಿಂದ ಪ್ರೇರಕವಾಗಿ ಕರ್ಮಗಳನ್ನು ಮಾಡಿಸುತ್ತವೆ. ಅಂತಹ ಪ್ರೇರಕವಾದ ವೇದ ಶಬ್ದಗಳಿಗೆ ಚೈತನ್ಯ ರೂಪವನ್ನು ಕೊಟ್ಟವಳು.

Comments

Popular posts from this blog

'ಓಂ ಗಂ ಗಣಪತಯೇ ನಮಃ'

ಶ್ರೀಮದ್ವೇಂಕಟೇಶ ಮಹಾತ್ಮೇ ಶ್ರೀ ವೇಂಕಟೇಶ ಸ್ತೋತ್ರಂ

ಕನಕದಾಸರ ಮೋಹನತರಂಗಿಣಿ