Posts

Showing posts with the label ಶಂಕರ

ದೇಹವೆಂಬುದೊಂದು ದೇವಾಲಯವು

Image
    ಶ್ರೀಶಂಕರಾಚಾರ್ಯರ ಬೋಧನೆಗೆ ಒಳಪಟ್ಟಿರುವವರೆಲ್ಲರೂ ತಮ್ಮ ಮನೆಗಳಲ್ಲಿ ದೇವರ ಪೂಜೆಯನ್ನು ಮಾಡುವಾಗ ಆವಾಹನೆಯ ಕಾಲಕ್ಕೆ ಈ ಶ್ಲೋಕವನ್ನು ತಪ್ಪದೆ ಹೇಳಿಕೊಳ್ಳುವರು - ದೇಹೋ ದೇವಾಲಯಃ ಪ್ರೋಕ್ತೋಜೀವೋ ದೇವಃ ಸನಾತನಃ | ತ್ಯಜೇದಜ್ಞಾನನಿರ್ಮಾಲ್ಯಂ ಸೋಹಂಭಾವೇನ ಪೂಜಯೇತ್ || ದೇಹವೇ ದೇವಾಲಯವು, ಜೀವನೇ ಸನಾತನನಾದ ದೇವನು, ಅಜ್ಞಾನವೆಂಬ ನಿರ್ಮಾಲ್ಯವನ್ನು ತೆಗೆದುಹಾಕಬೇಕು, ಆತನೇ ನಾನೆಂಬ ಭಾವದಿಂದ ಪೂಜೆಮಾಡಬೇಕು. ಎಂಬುದು ಇದರ ಅಕ್ಷರಾರ್ಥವು. ಈ ಶ್ಲೋಕವು ಯಾವ ಪುರಾಣದಲ್ಲಿದೆಯೋ ತಿಳಿಯದು, ಆದರೆ ಇದರ ವ್ಯಾಪಕತೆಯು ಮಾತ್ರ ದಕ್ಷಿಣದಲ್ಲಿ ಸೇತುವಿನಿಂದ ಹಿಡಿದು ಉತ್ತರದಲ್ಲಿ ಹಿಮಾಚಲದವರೆಗೂ ಇದೆ.     ಮೊಟ್ಟಮೊದಲನೆಯ ಪಾದವು ದೇಹವೇ ದೇವಾಲಯವೆಂದು ಹೇಳುತ್ತದೆ. ಇದರ ಅಭಿಪ್ರಾಯವನ್ನು ಚೆನ್ನಾಗಿ ಮನಸ್ಸಿನಲ್ಲಿ ತಂದುಕೊಂಡವರು ತನ್ನ ಆಚರಣೆಯನ್ನು ಹೇಗೆ ಇಟ್ಟುಕೊಳ್ಳಬೇಕಾಗುವದೆಂಬುದನ್ನು ನೋಡೋಣ. ದೇವಾಲಯಗಳಲ್ಲಿ ಹೀಗೆ ಹೀಗೆ ನಡೆದುಕೊಳ್ಳಬೇಕೆಂಬ ನಿಯಮವಿರುವದು. ಎಲ್ಲಕ್ಕೂ ಮೊದಲಾಗಿ ದೇವಾಲಯವು ಪವಿತ್ರವೆಂಬ ಭಾವನೆ ಬರುವಂತೆ ಅದನ್ನು ಚೊಕ್ಕಟವಾಗಿಟ್ಟುಕೊಳ್ಳಬೇಕು. ಅದರ ಹೊರಗೂ ಒಳಗೂ ದಿನದಿನವೂ ಗುಡಿಸಿ, ಸಾರಿಸಿ, ರಂಗೋಲೆಹಾಕಿಡಬೇಕು, ಅದರ ಒಳಕ್ಕೆ ಧಾರಾಳವಾಗಿ ಗಾಳಿಯೂ ಬೆಳಕೂ ಬರುವಂತೆ ನೋಡಿಕೊಳ್ಳಬೇಕು, ಗೋಡೆಗೆ ಆಗಾಗ ಸುಣ್ಣವನ್ನು ಒಳಿಸಿಸಬೇಕು, ಪರಮೇಶ್ವರನ ದಿವ್ಯಗುಣಕರ್ಮಗಳನ್ನು ನೆನಪಿಗೆ ತರುವ ಸು...

ಪಗಡೆಯಾಟ (ಮಗುವಿನ ಗೆಲುವು ತಾಯಿಗೆ ಸಂತೋಷ)

Image
    ಆಟ ಪ್ರಾರಂಭವಾಯಿತು. ದೇವಸ್ಥಾನದ ಅರಿಸಿನ, ಕುಂಕುಮ, ಗಂಧದ ಪುಡಿಗಳನ್ನು ಉಪಯೋಗಿಸಿ ಪಗಡೆ ಆಟದ ನಕ್ಷೆಯನ್ನು ಶ್ರೀಗಳವರು ಬರೆದರು. ದೇವಿ ತನ್ನ ಶಕ್ತಿಯಿಂದ ದಿವ್ಯ ದಾಳಿಗಳನ್ನು ಸೃಷ್ಟಿಸಿದಳು! ಶಂಕರರು ಪೂಜೆಗಾಗಿ ದೇವಿಗೆ ಬಳಸಿದ್ದ ಹೂವುಗಳನ್ನು ಆಟದಲ್ಲಿ ತಮ್ಮ ನಡಿಗೆಯ ಕಾಯಿಗಳನ್ನಾಗಿಯೂ, ಅವಳ ಆಭರಣದ ಮುತ್ತು ರತ್ನಗಳನ್ನು ಬಳಸಿ ಅವಳ ನಡಿಗೆಯ ಕಾಯಿಗಳನ್ನಾಗಿಯೂ ಸಿದ್ಧಪಡಿಸಿದರು. ದೇವಿ ಆಟವಾಡಲೆಂದು ಗರ್ಭಗುಡಿಯ ಪೀಠದ ಮೇಲೆ ಕುಳಿತಳು. ಶ್ರೀಗಳವರು ಅವಳೆದುರು ಪದ್ಮಾಸನ ಹಾಕಿ ಗರ್ಭಗುಡಿಯ ಹೊಸ್ತಿಲ ಹೊರಗೆ ಕುಳಿತು ಆಟ ಪ್ರಾರಂಭಿಸಿದರು. ಹಾಗೆಯೇ ಪ್ರಶಸ್ತವಾದ ಆ ಕಾಲ ವ್ಯರ್ಥವಾಗದಂತೆ ಲಲಿತಾ ಸಹಸ್ರನಾಮದ ಬೇರೆ ಬೇರೆ ನಾಮಗಳನ್ನು ಜಪಿಸುತ್ತಾ ಆಟ ಮುಂದುವರೆಸಲು ದೇವಿಯ ಅಪ್ಪಣೆ ಬೇಡಿದರು. ಅಷ್ಟೇ ಅಲ್ಲ ದೇವಿ ತನಗೆ ಬೇಕಾದ ಗರ ಬೀಳುವಂತೆ ಹೊಂದಿದ್ದ ಶಕ್ತಿಯನ್ನು ತಮಗೂ ಅನುಗ್ರಹಿಸಿ ತಮಗೆ ಬೇಕಾದ ಗರ ಬೀಳಿಸಿಕೊಳ್ಳಲು ಸಹಾಯ ಮಾಡಬೇಕೆಂದು ಕೇಳಿಕೊಂಡರು. ದೇವಿ ಉದಾರತೆಯಿಂದ ಅನುಗ್ರಹಿಸಿದಳು. ಆಟ ಪ್ರಾರಂಭವಾಯಿತು.     ಮೊದಲು ದಾಳಿ ಉರುಳಿಸಿದವರು ಶ್ರೀಗಳೇ, ಬಿದ್ದ ಗರ ಒಂಬತ್ತು! ಅವರು 'ಶ್ರೀ ಚಕ್ರರಾಜ ನಿಲಯಾ' ಎಂದು ದೇವಿಯ ನಾಮ ಹೇಳಿ, ತಮ್ಮ ಕಾಯಿ ನಡೆಸುವ ಮುನ್ನ ಶ್ರೀಚಕ್ರ ನಿಲಯಳಾಗಿರುವ ದೇವಿಯ ಶ್ರೀಚಕ್ರಕ್ಕೆ ಒಂಬತ್ತು ಆವರಣಗಳಿರುವುದರನ್ನು ಹೇಳಿ ಅದರ ಸಂಕೇತವಾಗಿ ಒಂಬತ್ತು ಅವರಣಗಳ ಗೆರೆ...

ನಿರ್ವಾಣಷಟ್ಕಂ - ಶ್ರೀ ಆದಿ ಶಂಕರಾಚಾರ್ಯ

Image
ಮನೋಬುದ್ಧ್ಯಹಂಕಾರಚಿತ್ತಾನಿ ನಾಹಂ ನ ಕರ್ಣೌ ನ ಜಿಹ್ವಾ ನ ಚ ಘ್ರಾಣ ನೇತ್ರೇ | ನ ಚ ವ್ಯೋಮ ಭೂಮಿರ್ನ ತೇಜೋ ನ ವಾಯುಃ ಚಿದಾನಂದರೂಪಃ ಶಿವೋಹಂ ಶಿವೋಹಂ ||1|| ಮನಸ್ಸು, ಬುದ್ಧಿ, ಅಹಂಕಾರ, ಚಿತ್ತ ಇವಾವುವೂ ನಾನಲ್ಲ. ಕಿವಿ, ಕಣ್ಣು ಮುಂತಾದ ಪಂಚೇಂದ್ರಿಯಗಳೂ ನಾನಲ್ಲ. ಆಕಾಶ, ಭೂಮಿ, ಅಗ್ನಿ, ವಾಯು ಮುಂತಾದ ಪಂಚಭೂತಗಳೂ ನಾನಲ್ಲ. ಆನಂದಸ್ವರೂಪನಾದ ಸದಾಶಿವನೇ ನಾನಾಗಿದ್ದೇನೆ. ನ ಚ ಪ್ರಾಣಸಂಜ್ಞೋ ನ ವೈ ಪ್ರಾಣವಾಯುಃ ನ ವಾ ಸಪ್ತಧಾತುರ್ನ ವಾ ಪಂಚಕೋ ಶಃ ನ ವಾಕ್ಪಾಣಿಪಾದೌ ನ ಚೋಪಸ್ಥ ಪಾಯೂ ಚಿದಾನಂದರೂಪಃ ಶಿವೋಹಂ ಶಿವೋಹಂ ||2|| ಪ್ರಾಣವೆಂಬ ಹೆಸರಿನವನು ನಾನಲ್ಲ. ಪ್ರಾಣ, ಅಪಾನ ವ್ಯಾನ, ಉದಾನ, ಸಮಾನ ಈ ಪಂಚಪ್ರಾಣವಾಯುವೂ ನಾನಲ್ಲ. ಅನ್ನಮಯ, ಪ್ರಾಣಮಯ, ಮನೋಮಯ, ವಿಜ್ಞಾನಮಯ, ಆನಂದಮಯ ಮುಂತಾದ ಪಂಚಕೋಶಗಳೂ ನಾನಲ್ಲ. ಚರ್ಮ, ಮಾಂಸ, ರಕ್ತ, ಮೇದಸ್ಸು, ಮಜ್ಜಾ, ನರ, ಎಲುಬುಗಳೆಂಬ ಸಪ್ತಧಾತುಗಳೂ ನಾನಲ್ಲ. ವಾಗೀಂದ್ರಿಂಯ, ಕೈ, ಕಾಲು ಮುಂತಾದ ಕರ್ಮೇಂದ್ರಿಯಗಳೂ, ವಿಸರ್ಜನಾಂಗಗಳು ನಾನಲ್ಲ. ಚಿದಾನಂದಸ್ವರೂಪನಾದ ಸದಾಶಿವನೇ ನಾನಾಗಿದ್ದೇನೆ. ನ ಮೇ ದ್ವೇಷರಾಗೌ ನ ಮೇ ಲೋಭಲೋಹೌ ಮದೋನೈವ ಮೇ ನೈವ ಮಾತ್ಸರ್ಯಭಾವಃ | ನ ಧರ್ಮೋ ನ ಚಾರ್ಥೋ ನ ಕಾವೋ ನ ವೋಕ್ಷಃ ಚಿದಾನಂದರೂಪಃ ಶಿವೋsಹಂ ಶಿವೋsಹಂ ||3|| ನನಗೆ ರಾಗದ್ವೇಷಗಳಾಗಲಿ, ಲೋಭಮೋಹಗಳಾಗಲಿ, ಗರ್ವವಾಗಲಿ, ಹಗೆತನವಾಗಲಿ ಇಲ್ಲ. ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳೂ ನನಗಿಲ್ಲ. ಚಿನ...

ಮಾನವತೆಗೆ ಅದ್ವೈತದ ಕೊಡುಗೆ

Image
    ನಮ್ಮ ಭರತಖಂಡದ ಸಂಸ್ಕೃತಿಯ ಗನಿಗಳಾದ ವೇದ-ಪುರಾಣ ಇತಿಹಾಸಗಳಲ್ಲಿ ಮಾನವನೆಂದರೆ ಯಾರು? ಎಂಬಿದನ್ನು ಚೆನ್ನಾಗಿ ವಿವೇಚಿಸಿ ತಿಳಿಸಿದ್ದಾರೆ. ಪ್ರತ್ಯಕ್ಷಪ್ರಮಾಣದಿಂದ ಕಂಡುಬರುವ, ಮನುಷ್ಯಶರೀರಧಾರಿಯಾದ ವ್ಯಕ್ತಿಯೇ ಮಾನವನು - ಎಂಬಿಷ್ಟನ್ನೇ ಶಾಸ್ತ್ರಗಳು ಒಪ್ಪಿರುವದಿಲ್ಲ. ಶರೀರದ ಜೊತೆಗೆ ಅಂತಃಕರಣವೂ, ಅದಕ್ಕೆ ಹೊಂದಿಕೊಂಡಂತೆ ದೈವೀಗುಣಗಳೂ ಇರುವವನನ್ನೇ ಮಾನವ, ಪುರುಷ - ಎಂದು ಅಲ್ಲಿ ಕರೆದಿರುತ್ತದೆ. ಮಾನವನ ಸೃಷ್ಟಿಯ ವಿಷಯಕ್ಕೆ ಉಪನಿಷತ್ತಿನಲ್ಲಿ ಈ ವರ್ಣನೆಯಿದೆ : "ಆತ್ಮನಿಂದ ಆಕಾಶವು ಹುಟ್ಟಿತು, ಆಕಾಶದಿಂದ ಕ್ರಮವಾಗಿ ವಾಯು, ತೇಜಸ್ಸು, ಜಲ, ಪೃಥ್ವಿಗಳೂ ಅನಂತರ ಪೈರುಗಳೂ ಅನ್ನವೂ ಅನ್ನದಿಂದ ಪುರುಷನೂ ಹುಟ್ಟಿರುತ್ತಾನೆ." ಈ ವಿವರಣೆಯು ತೈತ್ತಿರೀಯೋಪನಿಷತ್ತಿನಲ್ಲಿದೆ. ಅಲ್ಲಿ ಶ್ರೀ ಶಂಕರಾಚಾರ್ಯರು ವ್ಯಾಖ್ಯಾನಮಾಡಿರುವದು ಹೇಗೆಂದರೆ : "ಎಲ್ಲಾ ಚೇತನಾಚೇತನವಸ್ತುಗಳೂ ಬ್ರಹ್ಮದಿಂದಲೇ ಹುಟ್ಟಿ ಬಂದು ಬ್ರಹ್ಮವಂಶಕ್ಕೇ ಸೇರಿದ್ದರೂ ಶ್ರುತಿಯು ಪುರುಷನನ್ನೇ ಏಕೆ ಗ್ರಹಿಸಿದೆ? ಎಂದರೆ ಬ್ರಹ್ಮದ ಆವಿರ್ಭಾವವು ಮನುಷ್ಯನಲ್ಲಿ ಪೂರ್ಣವಾಗಿರುವದರಿಂದ - ಎಂದು ತಿಳಿಯಬೇಕು. ಪುರುಷನು ತಿಳಿವಳಿಕೆಯಿಂದ ಕೂಡಿದವನಾಗಿದ್ದು ಮಾತನಾಡುವದು, ನೋಡುವದು, ಕೇಳುವದು - ಮುಂತಾದ ವ್ಯವಹಾರಗಳ ಜೊತೆಗೆ, ನಾಳೆಗೇನು? ವಯಸ್ಸಾದ ಮೇಲೆ ಹೇಗೆ? ಈ ಶರೀರವನ್ನು ಬಿಟ್ಟ ಅನಂತವೂ ಜನ್ಮಾಂತರಲೋಕಾಂತರಗಳಲ್ಲಿಯೂ ಸುಖವಾಗಿರುವದು ಹೇಗೆ? ಮುಂತಾದ ರೀ...

ವಿಜ್ಞಾನನೌಕಾಸ್ತುತಿ - (ಶ್ರೀಶಂಕರಾಚಾರ್ಯರವರ ಕೃತಿ)

Image
ತಪೋಯಜ್ಞದಾನಾದಿಭಿಃ ಶುದ್ಧ ಬುದ್ಧಿ- ರ್ವಿರಕ್ತೋ ನೃಪಾದೌ ಪದೇ ತುಚ್ಛಬುದ್ಧ್ಯಾ | ಪರಿತ್ಯಜ್ಯ ಸರ್ವಂ ಯದಾಪ್ನೋತಿ ತತ್ತ್ವಂ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||1|| ತಪಸ್ಸು, ಯಜ್ಞ, ದಾನ- ಮುಂತಾದವುಗಳಿಂದ ಚಿತ್ತಶುದ್ಧಿಯನ್ನು ಪಡೆದು ದೊರೆತನವೇ ಮುಂತಾದ ಪದವಿಯಲ್ಲಿ ಕೂಡ ತುಚ್ಛಬುದ್ಧಿಯುಳ್ಳವರಾಗಿ ವೈರಾಗ್ಯದಿಂದ ಎಲ್ಲವನ್ನೂ ಬಿಟ್ಟು ಯಾವ ತತ್ತ್ವವನ್ನು ಪಡೆಯುವರೋ ಆ ನಿತ್ಯವಾದ ಪರಬ್ರಹ್ಮವೇ ನಾನಾಗಿರುವೆನು. ದಯಾಲುಂ ಗುರುಂ ಬ್ರಹ್ಮನಿಷ್ಠಂ ಪ್ರಶಾನ್ತಂ ಸಮಾರಾಧ್ಯ ಮತ್ಯಾ ವಿಚಾರ್ಯ ಸ್ವರೂಪಮ್ | ಯದಾಪ್ನೋತಿ ತತ್ತ್ವಂ ನಿದಿಧ್ಯಾಸ್ಯ ವಿದ್ವಾನ್ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||2|| ಕರುಣಾಳುವೂ ಪರಮಶಾಂತಿಯುಳ್ಳಾತನೂ ಆಗಿರುವ ಬ್ರಹ್ಮನಿಷ್ಠನಾದ ಗುರುವನ್ನು ಸೇವಿಸಿ ಮಾಡಿದ ಮನನದಿಂದ ತನ್ನ ಸ್ವರೂಪವನ್ನು ಕುರಿತು ವಿಚಾರಮಾಡಿ ನಿದಿಧ್ಯಾಸನದಿಂದ ಜ್ಞಾನಿಯಾಗಿ ಯಾವ ತತ್ತ್ವವನ್ನು ಪಡೆದುಕೊಳ್ಳುತ್ತಾನೋ ಆ ನಿತ್ಯವಾದ ಪರಬ್ರಹ್ಮನೇ ನಾನಾಗಿರುವೆನು. ಯದಾನನ್ದರೂಪಂ ಪ್ರಕಾಶಸ್ವರೂಪಂ ನಿರಸ್ತಪ್ರಪಞ್ಚಂ ಪರಿಚ್ಛೇದಶೂನ್ಯಮ್ | ಅಹಂಬ್ರಹ್ಮವೃತ್ತ್ಯೈಕಗಮ್ಯಂ ತುರೀಯಂ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||3|| ಯಾವದು ಅನಂದಸ್ವರೂಪವಾಗಿಯೂ ಪ್ರಕಾಶರೂಪವಾಗಿಯೂ ಪ್ರಪಂಚರಹಿತವಾಗಿ ಯಾವ ಎಲ್ಲೆಕಟ್ಟೂ ಇಲ್ಲದೆ 'ನಾನು ಬ್ರಹ್ಮವು' ಎಂಬ ವ್ಯಕ್ತಿಯಿಂದಲೇ ಅರಿಯುವದಕ್ಕೆ ತಕ್ಕದ್ದಾಗಿರುವದೋ ಅವಸ್ಥಾತ್ರಯವನ್ನು ಮಿರಿದ ನ...

ಶ್ರೀರಾಮಕರ್ಣಾಮೃತಮ್ (ಶ್ರೀಶಂಕರಾಚಾರ್ಯಕೃತ)

ಶ್ರೀರಾಮಃ ಸಕಲೇಶ್ವರೋ ಮಮ ಪಿತಾ ಮಾತಾ ಚ ಸೀತಾ ಮಮ ಭ್ರಾತಾ ಬ್ರಹ್ಮ ಸಖಾ ಪ್ರಭಂಜನಸುತಃ ಪತ್ನೀ ವಿರಕ್ತಿಃ ಪ್ರಿಯಾ | ವಿಶ್ವಾಮಿತ್ರವಿಭೀಷಣಾದಿವಶಗಾ ಮಿತ್ರಾಣಿ ಬೋಧಸ್ಸುತೋ ಭಕ್ತಿಃ ಶ್ರೀಹರಿಸಂಗತಾ ರತಿಸುಖಂ ವೈಕುಂಠಮಸ್ಮತ್ಪದಮ್ ||1||     ಎಲ್ಲರಿಗೂ ಒಡೆಯನಾದ ಶ್ರೀರಾಮನು ತನ್ನ ತಂದೆ, ಸೀತೆಯು ನನ್ನ ತಾಯಿ. ಬ್ರಹ್ಮನು ಸೋದರನು. ವಾಯುಪುತ್ರನಾದ(ಹನುಮಂತನು) ಸ್ನೇಹಿತನು. ವೈರಾಗ್ಯಳೆಂಬುವಳೇ ಪ್ರಿಯಳಾದ ಹೆಂತಿಯು. ವಿಶ್ವಾಮಿತ್ರ, ವಿಭೀಷಣರೇ ಮುಂತಾದ ಅನುಯಾಯಿಗಳೇ ನನ್ನ ಮಿತ್ರರು. ಜ್ಞಾನವೇ ಪುತ್ರನು. ಶ್ರೀಹರಿಯಲ್ಲಿ ಅನುರಕ್ತವಾದ ಭಕ್ತಿಯೇ ರತಿಸುಖವು, ವೈಕುಂಠವೇ ನಮ್ಮ ಊರು. ರಾಮಂ ಶ್ಯಾಮಾಭಿರಾಮಂ ರವಿಶಶಿನಯನಂ ಕೋಟಿಸೂರ್ಯಪ್ರಕಾಶಂ ದಿವ್ಯಂ ದಿವ್ಯಾಸ್ತ್ರಪಾಣಿಂ ಶರಮುಖಶರಧಿಂ ಚಾರುಕೋದಂಡಹಸ್ತಮ್ | ಕಾಲಂ ಕಾಲಾಗ್ನಿರುದ್ರಂ ರಿಪುಕುಲದಹನಂ ವಿಘ್ನವಿಚ್ಛೇದದಕ್ಷಂ ಭೀಮಂ ಭೀಮಾಟ್ಟಹಾಸಂ ಸಕಲಭಯಹರಂ ರಾಮಚಂದ್ರಂ ಭಜೇಹಮ್ ||2||         ಕಪ್ಪಾದ ದೇಹಕಾಂತಿಯುಳ್ಳ, ಸೂರ್ಯಚಂದ್ರರೇ ಕಣ್ಣಾಗಿ ಉಳ್ಳ, ಕೋಟಿ ಸೂರ್ಯರಂತೆ ಹೊಳೆಯುವ, ಪ್ರಕಾಶರೂಪನಾದ, ದಿವ್ಯವಾದ ಅಸ್ತ್ರಗಳನ್ನು ಹಿಡಿದಿರುವ, ಸಮುದ್ರದೋಪಾದಿಯ ಬಾಣಸಮೂಹವುಳ್ಳ, ಬಿಲ್ಲನ್ನು ಹಿಡಿದ ಸುಂದರವಾದ ಕೈಯುಳ್ಳ, (ರಾಕ್ಷಸರಿಗೆ) ಮೃತ್ಯುರೂಪನಾದ, ಕಾಲಾಗ್ನಿಯಂತೆ ಭಯಂಕರನಾದ, ಶತ್ರುಗಳ ಗುಂಪನ್ನು ಸುಡುವ, ಅಡ್ಡಿಗಳನ್ನು ತುಂಡುಮಾಡುವದರ...