Posts

Showing posts with the label ಹಬ್ಬಗಳು

ಕಾವ್ಯಸಾಹಿತ್ಯದಲ್ಲಿ ನಿರ್ವಿಘ್ನಕಾರಕ

Image
      ಇಡೀ ಭರತ ಖಂಡದಲ್ಲಿ ಆಚರಣೆಯಲ್ಲಿಟ್ಟುಕೊಂಡು ಭಕ್ತಿಯಿಂದ ಸೇವಾಕೈಂಕರ್ಯಾದಿಗಳನ್ನು ನಡೆಸಿಕೊಂಡು ಬರುತ್ತಿರುವ ಉತ್ಸವಾದಿಗಳಲ್ಲಿ ಶ್ರೀ ಗಣಪತಿಯ ಮಹೋತ್ಸವವು ಬಹು ಪ್ರಸಿದ್ಧಿಗೆ ಬಂದಿರುವ ವಿಚಾರ ಸಕಲರಿಗೂ ವೇದ್ಯವಾಗಿದೆ. ಈ ಜಗತ್ತಿನ ಯಾವ ಭಾಗದಲ್ಲೇ ಇರಲಿ ಸಕಲ ಭಾರತೀಯರೂ ಕಡ್ಡಾಯವಾಗಿ ಶ್ರೀಗಣಪತಿಯನ್ನು ಪೂಜಿಸುತ್ತಲಿರುತ್ತಾರೆ. ಭರತಖಂಡದ ಆಸ್ತೀಕರನ್ನು ಮುಖ್ಯವಾಗಿ ನಾಲ್ಕು ಗುಂಪನ್ನಾಗಿ ಮಾಡಬಹುದು : 1. ವಿಷ್ಣುವಿನ ಆರಾಧಕರು 2. ಶೈವಾರಾಧಕರು 3. ಶಕ್ತಿ ಆರಾಧಕರು 4. ಶೂನ್ಯೋಪಾಸಕರು ಇವರಲ್ಲಿ ಕೆಲವರು ವೇದಗಳನ್ನು ಒಪ್ಪುವವರು, ಕೆಲವರು ಒಪ್ಪರು. ಕೆಲವು ವೈಷ್ಣವರು ಶೈವಾರಾಧನೆಯನ್ನು ಮಾಡುವುದಿಲ್ಲ ಮತ್ತೆ ಕೆಲವು ಶೈವರು ವಿಷ್ಣುವನ್ನು ಪೂಜಿಸುವುದಿಲ್ಲ ಆದರೆ ಪ್ರತಿ ಒಬ್ಬರೂ ಯಾವ ಮತವನ್ನೇ ಅವಲಂಬಿಸಿರಲಿ ಇಂದಿನ ಕಥಾನಾಯಕನಾದ ನಮ್ಮ ಗಣಪತಿಯನ್ನು ಸ್ವಪ್ರೇರಣೆಯಿಂದ ಆರಾಧಿಸುತ್ತಾರೆ ಅಂದಮೇಲೆ ಈ ಗಣಪತಿಯ ಮಹಿಮೆಯನ್ನು ತಿಳಿಯಬೇಕಾದುದು ಆದ್ಯಕರ್ತವ್ಯವಾಗಿದೆ.     ಹಿಂದೆ ನೈಮಿಶಾರಣ್ಯದಲ್ಲಿ ಮಹರ್ಷಿಗಳು ಮಾಡುತ್ತಿದ್ದ ಸಾತ್ವಿಕ ಕರ್ಮಗಳಿಗೆ ಅಡ್ಡಿಬರಲು, ಸೂತರು ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿ ತಿಥಿಯಲ್ಲಿ ಈ ಗಣಪತಿಯನ್ನು ಆರಾಧಿಸಿದರೆ ಎಲ್ಲಾ ಕಾರ್ಯಗಳೂ ಸುಗಮವಾಗುವುದೆಂದರು.     ಉತ್ತಮಕಾರ್ಯಾದಿಗಳಲ್ಲಿ ಸುಜನರಿಗೆ ಅನುಕೂಲನಾಗಿ ದುಷ್ಟರಿಗೆ ವಿಘ್ನಕಾರ...

ಪಿತೃಪಕ್ಷ

Image
    ಭಾದ್ರಪದ ಕೃಷ್ಣಪಕ್ಷವನ್ನು ಪಿತೃಪಕ್ಷವೆಂದು ಕರೆಯುತ್ತಾರೆ. ಈ ಪಕ್ಷದಲ್ಲಿ ಶ್ರಾದ್ಧವನ್ನು ಮಾಡುವದೂ ಪಿತೃತರ್ಪಣವನ್ನು ಅನುಷ್ಠಿಸುವದೂ ಪಿತೃಗಳಿಗೆ ತೃಪ್ತಿಯನ್ನುಂಟುಮಾಡುತ್ತದೆ ಎಂದು ಹಿಂದುಗಳ ನಂಬಿಕೆ.     ವೇದಗಳಲ್ಲಿ ದೇವಯಾನ, ಪಿತೃಯಾನ ಎಂಬ ಎರಡು ಕರ್ಮಗತಿಗಳನ್ನು ವರ್ಣಿಸಿರುತ್ತದೆ. ಉಪಾಸಕರಾದವರು ದೇವಲೋಕಗಳಿಗೆ ಹೋಗಿ ಅಲ್ಲಿ ದೇವತೆಗಳ ಸಾಮಿಪ್ಯ, ಸಾಲೋಕ್ಯ, ಸಾಯುಜ್ಯ - ಎಂಬ ಫಲಗಳನ್ನು ಅನುಭವಿಸುತ್ತಾರೆ. ಕರ್ಮಿಗಳಾದವರು ಪಿತೃಲೋಕಕ್ಕೆ ಹೋಗಿ ಅಲ್ಲಿ ತಮ್ಮ ತಮ್ಮ ಕರ್ಮಕ್ಕೆ ಅನುಗುಣವಾಗಿ ಫಲವನ್ನು ಅನುಭವಿಸುತ್ತಾರೆ - ಹೀಗೆಂಬುದು ಶಾಸ್ತ್ರಕಾರರ ಹೇಳಿಕೆ.     ಪಿತೃಗಳಿಗೆ ತೃಪ್ತಿಯಾಗಲೆಂದು ಶ್ರದ್ಧೆಯಿಂದ ಮಾಡುವ ನಿಯತಕಾಲಿಕ ಕರ್ಮವನ್ನು ಶ್ರಾದ್ಧವೆಂದು ಕರೆಯುತ್ತಾರೆ; ಎಳ್ಳುನೀರುಗಳನ್ನು ಪಿತೃತೃಪ್ತ್ಯರ್ಥವಾಗಿ ಬಿಡುವ ಕರ್ಮವನ್ನು ತರ್ಪಣವೆನ್ನುತ್ತಾರೆ. ಶಕ್ತನಾದವನು ಪಿತೃಪಕ್ಷದಲ್ಲಿ ಪ್ರತಿದಿನವೂ ಶ್ರಾದ್ಧವನ್ನು ಮಾಡಿ ತರ್ಪಣವನ್ನು ಕೊಡಬೇಕು; ಅಶಕ್ತರಾದವರು ಗೊತ್ತಾದ ಒಂದು ದಿನವಾದರೂ ಈ ಕರ್ಮವನ್ನು ಮಾಡಬೇಕು. ಈ ಶ್ರಾದ್ಧಕ್ಕೆ ಮಹಾಲಯವೆಂಬ ಹೆಸರು ಬಂದಿರುತ್ತದೆ. ಈ ಪಕ್ಷವನ್ನು ಮಹಾಲಯ ಪಕ್ಷವೆಂದು ಕರೆಯುವ ವಾಡಿಕೆಯೂ ಇದೆ.     ಪಿತೃಗಳಿಗೆಂದು ಶ್ರಾದ್ಧವನ್ನು ಮಾಡಿದರೆ, ತರ್ಪಣವನ್ನು ಕೊಟ್ಟರೆ ಅವರಿಗೆ ಅದು ತೃಪ್ತಿಯನ್ನು ಹೇಗೆ ಮಾಡುತ್ತ...

ನಾಗರ ಪಂಚಮಿ ವ್ರತ

Image
    ಈ ವ್ರತವನ್ನು ಶ್ರಾವಣ ಶುಕ್ಲ ಪಂಚಮಿ ದಿನ ಪ್ರತಿ ವರ್ಷವೂ ಭಕ್ತರು ಆಚರಿಸುತ್ತಾರೆ. ಉಳಿದ ಎಲ್ಲಾ ವ್ರತಗಳಿಗಿಂತಲೂ ಕಟ್ಟುನಿಟ್ಟಾಗಿ ಇದನ್ನು ಅನುಷ್ಠಾನಮಾಡುವರು. ಅಣ್ಣ, ತಮ್ಮ, ಅಕ್ಕ, ತಂಗಿಯಂದಿರುಗಳುಳ್ಲವರು ಈ ದಿನ ಒಟ್ಟುಗೂಡಿ ನಾಗದೇವತೆಯನ್ನು ಪೂಜಿಸಿ 'ತನಿ'ಎರೆದು ತಾವೂ ಎರೆಸಿಕೊಳ್ಳುವ ಪದ್ಧತಿಯಿದೆ.     ವ್ರತಚೂಡಾಮಣಿಯಲ್ಲಿರುವಂತೆ ಹೇಮಾದ್ರಿ - ಎಂಬ ಗ್ರಂಥದ ಪ್ರಭಾಸಖಂಡದಲ್ಲಿರುವ ಭಾಗವೇ ಈ ವ್ರತಕ್ಕೆ ಮೂಲಪ್ರಮಾಣವು. ಅದರಲ್ಲಿ ಶ್ರಾವಣ ಶುಕ್ಲ ಪಂಚಮಿಯ ಷಷ್ಠೀಯುಕ್ತವಾಗಿದ್ದ ದಿನ ನಾಗಪೂಜೆಯನ್ನು ಮಾಡಬೇಕೆಂದೂ ನಾಗಗಳಲ್ಲದ ಸರ್ಪಗಳ ಪೂಜೆಗೆ ಚತುರ್ಥೀ ತಿಥಿಯು ಶ್ರೇಷ್ಠವೆಂದೂ ಹೇಳಿದೆ. ಸಾಮಾನ್ಯವಾಗಿ ಹೆಡೆಯುಳ್ಳ ಹಾವುಗಳನ್ನು ನಾಗಗಳೆಂದೂ ಉಳಿದ ಜಾತಿಯ ಹಾವುಗಳನ್ನು ಸರ್ಪಗಳೆಂದೂ ಕರೆಯುತ್ತಾರೆ. ಹೀಗೆ ನಾಗಪೂಜೆಯನ್ನು ಮಾಡುವವನು ಚತುರ್ಥೀ ದಿನ ಬೆಳಗ್ಗೆ ನಿರಾಹಾರನಾಗಿದ್ದು ರಾತ್ರೆ ಭೋಜನಮಾಡಿ ಪಂಚಮಿ ದಿನ ನಾಗಪೂಜೆಯನ್ನು ಮಾಡಬೇಕು. ಐದು ಹೆಡೆಗಳುಳ್ಳ ಐದು ಹಾವುಗಳನ್ನು ಪೂಜಿಸಬೇಕು. ಇವುಗಳನ್ನು ಬೆಳ್ಳಿಯಿಂದ ಅಥವಾ ಮರದಿಂದ ಮಾಡಿ ಬಿಳಿಯ ಬಣ್ಣವನ್ನು ಹಾಕಿ ಸಿದ್ಧಗೊಳಿಸಿದ ಅಥವಾ ಮಣ್ಣಿನಿಂದ ಮಾಡಿದ ಬಿಂಬಗಳಲ್ಲಿ ಅಥವಾ ರಂಗೋಲಿಯಲ್ಲಿ ಚಿತ್ರವನ್ನು ಬರೆದು ಅರ್ಚಿಸಬೇಕು. ಅನಂತ, ವಾಸುಕಿ, ಶೇಷ, ಪದ್ಮ, ಕಂಬಳ - ಮುಂತಾದ ಸುಪ್ರಸಿದ್ಧ ನಾಗಗಳನ್ನು ಈ ಪೂಜೆಯಲ್ಲಿ ಆಹ್ವಾನಿಸಬೇಕು. ಅರಿಸ...

ಗೀತಜಯಂತಿ

ಶ್ರೀಕೃಷ್ಣ ಅರ್ಜುನನಿಗೆ ೫೦೦೦ ವರ್ಷಗಳ ಹಿಂದೆ ಗೀತೋಪದೇಶ ಮಾಡಿದ. ಈ ಮಾತೇನೋ ನಿಜ. ಆದರೆ ಗೀತೆ ಸಾವಿರಾರು ವರ್ಷಗಳ ಹಿಂದಿನ ಐತಿಹಾಸಿಕ ಘಟನೆಯಾಗಿ ಮಾತ್ರವೆ ನಮಗೆ ಗ್ರಾಹ್ಯವಲ್ಲ. ಅದು ೫೦೦೦ ವರ್ಷಗಳ ಹಿಂದೆ ಕುರುಕ್ಷೇತ್ರದಲ್ಲಿ ಕೌರವ-ಪಾಂಡವರ ಯುದ್ಧದಲ್ಲಿ ನಡೆದ ಘಟನೆಯಷ್ಟೆ ಅಲ್ಲ. ಅದು ನಮ್ಮದೇ ಇತಿಹಾಸ. ಕುರುಕ್ಷೇತ್ರ ಎಲ್ಲೋ ಉತ್ತರ ಭಾರತದಲ್ಲಿರುವ ಒಂದು ಭೂಭಾಗವಲ್ಲ. ನಮ್ಮೆಲ್ಲರ ಹದಯ-ಕ್ಷೇತ್ರವೆ ಕುರುಕ್ಷೇತ್ರ. ನಮ್ಮ ಕರ್ಮಕ್ಷೇತ್ರವಾದ ನಮ್ಮ ಬದುಕೇ ಕುರುಕ್ಷೇತ್ರ. ನಮ್ಮಳಗೆಯೆ ಮಹಾಭಾರತದ ಯುದ್ಧ ನಡೆಯುತ್ತಿದೆ. ನಮ್ಮಳಗೆಯೆ ಕೌರವ ರಿದ್ದಾರೆ; ಪಾಂಡವರಿದ್ದಾರೆ! ಹದಿನೆಂಟು ಅಕ್ಷೋಹಿಣಿ ಸೇನೆಗಳಿವೆ. ನಮ್ಮೊಳಗಿನ ದುರ್ಯೋಧನ ಇನ್ನೊಬ್ಬರ ಆಸ್ತಿಯನ್ನು ಲಪಟಾಯಿಸು ಎನ್ನುತ್ತಿರು ತ್ತಾನೆ. ನಮ್ಮೊಳಗಿನ ದುಃಶಾಸನ ಪರಸ್ತ್ರೀಯರ ಮೇಲೆ ಕೈಮಾಡಲು ಹಾತೊರೆಯು ತ್ತಿರುತ್ತಾನೆ. ನಮ್ಮೊಗಿನ ವಿಕರ್ಣ ಸಜ್ಜನಿಕೆಯ ಮುಖವಾಡದ ಮಾತುಗಳನ್ನಾಡುತ್ತ ನಮ್ಮೊಳಗಿನ ಹುಳುಕನ್ನು ಮುಚ್ಚಿಡಲು ಪ್ರಯತ್ನಿಸುತ್ತಾನೆ. ಸಾವಿರಸಾವಿರ ದುಷ್ಟವೃತ್ತಿಗಳು ಇದನ್ನು ಆಗಗೊಡಲು ನಮ್ಮಳಗೆ ಶಸ್ತ್ರ ಹಿಡಿದು ಸಜ್ಜಾಗಿ ನಿಂತಿವೆ. ಇಂಥವರ ನಡುವೆಯೂ ನಮ್ಮೊಳಗಿನ ಧರ್ಮರಾಜ ‘ಛೇ, ಹೀಗೆಲ್ಲ ಮಾಡಬೇಡ’ ಎನ್ನುತ್ತಿರುತ್ತಾನೆ. ಭೀಮಾರ್ಜುನರು ‘ಇದರ ವಿರುದ್ಧ ಹೋರಾಡು’ ಎನ್ನುತ್ತಿರು ತ್ತಾರೆ. ನಕುಲ ‘ಶೀಲ ಕಳೆದುಕೊಂಡು ಕೆಟ್ಟ ಬಾಳು ಬದುಕಬೇಡ’ ಎಂದು ಎ...

ಧನುರ್ಮಾಸ

ಕೋದಂಡಸ್ತೇ ಸವಿತರಿ ಮುದ್ಗಾನ್ನಂ ಯೋ ನಿವೇದಯೇತ್ | ಸಹಸ್ರವಾರ್ಷೀಕೀಪೂಜಾ ದಿನೇನೈಕೇನ ಸಿದ್ಧ್ಯತಿ || ಆಗ್ನಿ ಪುರಾಣ ಧನುರಾಶಿಯಲ್ಲಿ ಸೂರ್ಯನಿರುವಾಗ ಹರಿಗೆ ಹುಗ್ಗಿಯನ್ನು ಒಂದು ದಿನವಾದರೂ ಸಮರ್ಪಿಸುವ ಮನುಷ್ಯನು ಒಂದು ಸಾವಿರ ವರ್ಷಗಳವರೆಗೆ ಪೂಜೆಮಾಡಿದ ಫಲವನ್ನು ಪಡೆಯುವನು ಎನ್ನುವ ಅಗ್ನಿ ಪುರಾಣದ ವಚನವಿದೆ. ಆದುದರಿಂದ ಧನುರ್ಮಾಸದ ಒಂದು ತಿಂಗಳ ಕಾಲ ಪ್ರತಿದಿನ ಉಷಃಕಾಲದಲ್ಲಿ ಶ್ರೀಹರಿಗೆಮುದ್ಗಾನ್ನವನ್ನು (ಹುಗ್ಗಿಯನ್ನು) ವಿಷ್ಣುವಿಗೆ ಸಮರ್ಪಿಸಿ ಸಂತರ್ಪಣೆಮಾಡುವುದರಿಂದ ಶ್ರೀಹರಿಯು ಪ್ರೀತನಾಗುವನು. ಧನುರ್ಮಾಸಪೂಜೆಯ ಕಾಲ :- ಮುಖ್ಯಾರುಣೋದಯೇ ಪೂಜಾ ಮಧ್ಯಮಾ ಲುಪ್ತತಾರಕಾ | ಅಧಮಾ ಸೂರ್ಯಸಹಿತಾ ಮಧ್ಯಾಹ್ನೇ ನಿಷ್ಫಲಾ ಭವೇತ್ || ಇಂತಹ ಪೂಜೆಗೆ ಮುಖ್ಯಕಾಲಅರುಣೋದಯ ಕಾಲವು ಉತ್ತಮ, ನಕ್ಷತ್ರಗಳು ಕಾಣದಿರುವಾಗ ಮಾಡುವುದುಮಧ್ಯಮ, ಸೂರ್ಯನು ಉದಯಿಸಿದ ಮೇಲೆ ಮಾಡುವುದು ಅಧಮ.ಮಧ್ಯಾಹ್ನಕಾಲದಲ್ಲಿ ಮಾಡುವುದು ನಿಷ್ಫಲ. ಆದುದರಿಂದ ಈ ಧನುರ್ಮಾಸದಲ್ಲಿ ಭಗವಂತನ ಪೂಜೆಯನ್ನು ಉಷಃಕಾಲದಲ್ಲಿಯೇ ಮಾಡಬೇಕು. ಹೇಗೆನಿತ್ಯದಲ್ಲಿಯೂ ಭಗವಂತನಿಗೆ ಷೋಡೋಶೋಪಚಾರ ಪೂಜೆಯನ್ನು ಸಲ್ಲಿಸಿ, ಭಗವಂತನಿಗೆನೈವೇದ್ಯಾದಿಗಳನ್ನು ಸಮರ್ಪಿಸುತ್ತೇವೆಯೋ ಹಾಗೆಯೇ ಧನುರ್ಮಾದಲ್ಲಿ ವಿಶೇಷವಾಗಿ ಅರುಣೋದಯಕಾಲದಲ್ಲಿಯೇ ಹುಗ್ಗಿಯನ್ನು ಮಾಡಿ ಭಗವಂತನಿಗೆ ಸಮರ್ಪಿಸಬೇಕು.ಹುಗ್ಗಿಯನ್ನು ಹೇಗೆ ಮಾಡಬೇಕೆಂಬುದನ್ನೂ ಪುರಾಣವೇ ತಿಳಿಸುತ್ತಿದೆ, ಹೀಗೆ - ...

ಪ್ರದೋಷಮಹಿಮೆ

    'ಪ್ರದೋಷ'ವೆಂದರೇನು? ಎಂಬುದು ಕೆಲವರ ಪ್ರಶ್ನೆ. ಪಂಚಾಂಗಗಳಲ್ಲಿ ಪ್ರತಿ ತಿಂಗಳ ಶುಕ್ಲು,ಕೃಷ್ಣ ಪಕ್ಷಗಳಲ್ಲಿಯೂ ತ್ರಯೋದಶೀದಿನ ಪ್ರದೋಷವೆಂದು ಬರೆದಿರುತ್ತದೆ. ತ್ರಯೋದಶೀತಿಥಿಯು ಪರಮೇಶ್ವರನಿಗೆ ಪ್ರಿಯವಾದದ್ದು ಅದು ಸಂಧ್ಯಾಕಾಲವ್ಯಾಪಿನಿಯಾದ ರಾತ್ರಿಗೆ 'ಪ್ರದೋಷ'ವೆಂದು ಹೆಸರು ದೋಷಾ ಎಂದರೆ ರಾತ್ರಿಯು, ಪ್ರ ಎಂದರೆ ಪ್ರಕೃಷ್ಟ - ಶ್ರೇಷ್ಠವಾದದ್ದು ಎಂದಭಿಪ್ರಾಯ. ಯಾವ ರಾತ್ರಿಯು ಪರಮೇಶ್ವರನಿಗೆ ಹೆಚ್ಚಿನ ಪ್ರಿಯವಾದದ್ದೋ ಅದನ್ನು ಪ್ರದೋಷವೆಂದು ಕರೆಯುತ್ತಾರೆ.     ಮತ್ತೊಂದು ಅರ್ಥದಲ್ಲಿ ಪ್ರತಿದಿನವೂ ಸಂಜೆ ಐದು ಘಂಟೆಯ ಅನಂತರದ ಕಾಲವನ್ನು 'ಪ್ರದೋಷಕಾಲ'ವೆಂದು ಕರೆಯುತ್ತಾರೆ. ಇದೂ ಸಹ ಈಶ್ವರನಿಗೆ ಪ್ರಿಯವಾದ ಕಾಲವೆಂದು ಬಲ್ಲವರ ಅಭಿಪ್ರಾಯ. ಹಗಲನ್ನು ಐದು ವಿಭಾಗಮಾಡಿ ಉಷಃಕಾಲ, ಪ್ರಾತಃಕಾಲ, ಸಂಗಮಕಾಲ, ಮಧ್ಯಾಹ್ನಕಾಲ, ಪ್ರದೋಷಕಾಲ- ಎಂಬ ಹೆಸರುಗಳಿಂದ ಕಾಲವಿದರು ಕರೆಯುತ್ತಾರೆ. ಭಾರತದೇಶದಲ್ಲಿ ಪ್ರಧಾನವಾದ ಶಿವದೇವಾಲಯಗಳಲ್ಲಿ ಈ ಐದು ಕಾಲಗಳಲ್ಲಿಯೂ ಪರಮೇಶ್ವರನಿಗೆ ಪೂಜಾದಿಗಳು ನಡೆಯುತ್ತವೆ.     ಪ್ರದೋಷಕಾಲದ ಮಹಿಮೆಯನ್ನು ವರ್ಣಿಸುವ 'ಪ್ರದೋಷಸ್ತೋತ್ರ'ವೆಂಬ ಒಂದು ಸ್ತುತಿಯು ಸ್ಕಾಂದಮಹಾಪುರಾಣದಲ್ಲಿದೆ. ಇದನ್ನು ಶಿವಭಕ್ತರೆಲ್ಲರೂ ಸಾಮಾನ್ಯವಾಗಿ ಪಠಿಸುತ್ತಾರೆ. ಈ ಸ್ತೋತ್ರದ ಭಾವಾರ್ಥವನ್ನು ಆಧಾರವಾಗಿಟ್ಟು ಕೊಂಡು ಈ ಲೇಖನವನ್ನು ಬರೆದಿರುತ್ತೇನೆ.     ...

ಮಹಾಶಿವರಾತ್ರಿಯ ತತ್ತ್ವ

    ಪ್ರತಿವರ್ಷವೂ ಮಾಘ ಬಹುಳ ಚತುರ್ದಶಿಯಂದು ಪ್ರಾಪ್ತವಾಗುವ ಮಹಾಶಿವರಾತ್ರಿಯ ಅನುಷ್ಠಾನವು ವಿಶ್ವಾದ್ಯಂತ ಅನೇಕ ಭಕ್ತರಿಂದ ಆಚರಿಸಲ್ಪಡುತ್ತದೆ. ಶಿವನ ಆರಾಧನೆಗೆ ಮುಖ್ಯವಾದ ದಿನವೇ ಶಿವರಾತ್ರಿಯು. ಇದು ಹಿಂದೂಪಂಚಾಂಗದ ಪ್ರಕಾರ ಪ್ರತಿ ಮಾಸದ ಕೃಷ್ಣಪಕ್ಷದ ಚತುರ್ದಶಿಯ ದಿನ ಪ್ರಾಪ್ತವಾಗುತ್ತದೆ. ಇದನ್ನು 'ಮಾಸಶಿವರಾತ್ರಿ'ಯೆಂದು ಕರೆಯುತ್ತಾರೆ, ಆದ್ದರಿಂದಲೇ ಮಾಘಮಾಸದಲ್ಲಿ ಬರುವ ಶಿವರಾತ್ರಿಗೆ 'ಮಹಾಶಿವರಾತ್ರಿ' ಎಂಬ ವಿಶೇಷವಾದ ಹೆಸರಿದೆ.     ರಾತ್ರಿಯು ಯಾವಾಗಲೂ ಜೀವರಿಗೆ ಭಯಂಕರವಾದುದು. ಎಲ್ಲಾ ಪದಾರ್ಥಗಳೂ ಕಗ್ಗತ್ತಲೆಯಲ್ಲಿ ಮುಳುಗಿರುವಾಗ ಏನೊಂದೂ ಕೆಲಸವು ಸಧ್ಯವಾಗುವದಿಲ್ಲ ಹಾಗೂ ಪ್ರಾಣಿಗಳಿಗೆಲ್ಲ ನಿದ್ರೆಯ ಸಮಯವೂ ರಾತ್ರಿಯೇ ಆಗಿದೆ ಕೆಲವೇ ಭೂತ ಪ್ರೇತಪಿಶಾಚಾದಿ ಸತ್ತ್ವಗಳಿಗೂ ಗೂಬೆ ಮುಂತಾದವುಗಳಿಗೂ ರಾತ್ರಿಯ ಚಟುವಟಿಕೆಯ ಕಾಲವಾಗಿರಬಹುದು, ಆದರೆ ಸಾಮಾನ್ಯವಾಗಿ ಎಲ್ಲರಿಗೂ ರಾತ್ರಿಯು ಅಮಂಗಳಕರವು ಹೀಗಿರುವಲ್ಲಿ 'ಶಿವರಾತ್ರಿ' ಎಂದು ರಾತ್ರಿಯನ್ನು ಮಂಗಳಕರವೆಂತ ಕರೆಯಲು ಕಾರಣವೇನು? ಆ ರಾತ್ರಿಗೆ ಮಂಗಳತ್ವವು ಉಂಟಾಗುವದಕ್ಕೆ ನಿಮಿತ್ತವೇನಾದರೂ ಇರಬಹುದೆ? ಎಂದು ಯಾರಾದರೂ ಕೇಳಬಹುದಾಗಿದೆ. ಇದಕ್ಕೆ ಉತ್ತರವನ್ನು ಒಂದು ಗೀತಾಶ್ಲೋಕದಿಂದ ಕಂಡುಹಿಡಿಯಲು ಯತ್ನಿಸೋಣ. ಹೇಗೆಂದರೆ: 'ಯಾ ನಿಶಾ ಸರ್ವಭೂತಾನಾಂ ತಸ್ಯಾಂ ಜಾಗರ್ತಿ ಸಂಯಮಿ' ಎಂಬ ಪದ್ಯವು ಗೀತಾಪಾಠಕರಿಗೆಲ್ಲ ಪರಿಚಿತವೇ ಆಗಿದೆ. ಎಲ್ಲಾ...