Posts

Showing posts with the label Shankaracharya

ನಿರ್ವಾಣಷಟ್ಕಂ - ಶ್ರೀ ಆದಿ ಶಂಕರಾಚಾರ್ಯ

Image
ಮನೋಬುದ್ಧ್ಯಹಂಕಾರಚಿತ್ತಾನಿ ನಾಹಂ ನ ಕರ್ಣೌ ನ ಜಿಹ್ವಾ ನ ಚ ಘ್ರಾಣ ನೇತ್ರೇ | ನ ಚ ವ್ಯೋಮ ಭೂಮಿರ್ನ ತೇಜೋ ನ ವಾಯುಃ ಚಿದಾನಂದರೂಪಃ ಶಿವೋಹಂ ಶಿವೋಹಂ ||1|| ಮನಸ್ಸು, ಬುದ್ಧಿ, ಅಹಂಕಾರ, ಚಿತ್ತ ಇವಾವುವೂ ನಾನಲ್ಲ. ಕಿವಿ, ಕಣ್ಣು ಮುಂತಾದ ಪಂಚೇಂದ್ರಿಯಗಳೂ ನಾನಲ್ಲ. ಆಕಾಶ, ಭೂಮಿ, ಅಗ್ನಿ, ವಾಯು ಮುಂತಾದ ಪಂಚಭೂತಗಳೂ ನಾನಲ್ಲ. ಆನಂದಸ್ವರೂಪನಾದ ಸದಾಶಿವನೇ ನಾನಾಗಿದ್ದೇನೆ. ನ ಚ ಪ್ರಾಣಸಂಜ್ಞೋ ನ ವೈ ಪ್ರಾಣವಾಯುಃ ನ ವಾ ಸಪ್ತಧಾತುರ್ನ ವಾ ಪಂಚಕೋ ಶಃ ನ ವಾಕ್ಪಾಣಿಪಾದೌ ನ ಚೋಪಸ್ಥ ಪಾಯೂ ಚಿದಾನಂದರೂಪಃ ಶಿವೋಹಂ ಶಿವೋಹಂ ||2|| ಪ್ರಾಣವೆಂಬ ಹೆಸರಿನವನು ನಾನಲ್ಲ. ಪ್ರಾಣ, ಅಪಾನ ವ್ಯಾನ, ಉದಾನ, ಸಮಾನ ಈ ಪಂಚಪ್ರಾಣವಾಯುವೂ ನಾನಲ್ಲ. ಅನ್ನಮಯ, ಪ್ರಾಣಮಯ, ಮನೋಮಯ, ವಿಜ್ಞಾನಮಯ, ಆನಂದಮಯ ಮುಂತಾದ ಪಂಚಕೋಶಗಳೂ ನಾನಲ್ಲ. ಚರ್ಮ, ಮಾಂಸ, ರಕ್ತ, ಮೇದಸ್ಸು, ಮಜ್ಜಾ, ನರ, ಎಲುಬುಗಳೆಂಬ ಸಪ್ತಧಾತುಗಳೂ ನಾನಲ್ಲ. ವಾಗೀಂದ್ರಿಂಯ, ಕೈ, ಕಾಲು ಮುಂತಾದ ಕರ್ಮೇಂದ್ರಿಯಗಳೂ, ವಿಸರ್ಜನಾಂಗಗಳು ನಾನಲ್ಲ. ಚಿದಾನಂದಸ್ವರೂಪನಾದ ಸದಾಶಿವನೇ ನಾನಾಗಿದ್ದೇನೆ. ನ ಮೇ ದ್ವೇಷರಾಗೌ ನ ಮೇ ಲೋಭಲೋಹೌ ಮದೋನೈವ ಮೇ ನೈವ ಮಾತ್ಸರ್ಯಭಾವಃ | ನ ಧರ್ಮೋ ನ ಚಾರ್ಥೋ ನ ಕಾವೋ ನ ವೋಕ್ಷಃ ಚಿದಾನಂದರೂಪಃ ಶಿವೋsಹಂ ಶಿವೋsಹಂ ||3|| ನನಗೆ ರಾಗದ್ವೇಷಗಳಾಗಲಿ, ಲೋಭಮೋಹಗಳಾಗಲಿ, ಗರ್ವವಾಗಲಿ, ಹಗೆತನವಾಗಲಿ ಇಲ್ಲ. ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳೂ ನನಗಿಲ್ಲ. ಚಿನ...

ವಿಜ್ಞಾನನೌಕಾಸ್ತುತಿ - (ಶ್ರೀಶಂಕರಾಚಾರ್ಯರವರ ಕೃತಿ)

Image
ತಪೋಯಜ್ಞದಾನಾದಿಭಿಃ ಶುದ್ಧ ಬುದ್ಧಿ- ರ್ವಿರಕ್ತೋ ನೃಪಾದೌ ಪದೇ ತುಚ್ಛಬುದ್ಧ್ಯಾ | ಪರಿತ್ಯಜ್ಯ ಸರ್ವಂ ಯದಾಪ್ನೋತಿ ತತ್ತ್ವಂ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||1|| ತಪಸ್ಸು, ಯಜ್ಞ, ದಾನ- ಮುಂತಾದವುಗಳಿಂದ ಚಿತ್ತಶುದ್ಧಿಯನ್ನು ಪಡೆದು ದೊರೆತನವೇ ಮುಂತಾದ ಪದವಿಯಲ್ಲಿ ಕೂಡ ತುಚ್ಛಬುದ್ಧಿಯುಳ್ಳವರಾಗಿ ವೈರಾಗ್ಯದಿಂದ ಎಲ್ಲವನ್ನೂ ಬಿಟ್ಟು ಯಾವ ತತ್ತ್ವವನ್ನು ಪಡೆಯುವರೋ ಆ ನಿತ್ಯವಾದ ಪರಬ್ರಹ್ಮವೇ ನಾನಾಗಿರುವೆನು. ದಯಾಲುಂ ಗುರುಂ ಬ್ರಹ್ಮನಿಷ್ಠಂ ಪ್ರಶಾನ್ತಂ ಸಮಾರಾಧ್ಯ ಮತ್ಯಾ ವಿಚಾರ್ಯ ಸ್ವರೂಪಮ್ | ಯದಾಪ್ನೋತಿ ತತ್ತ್ವಂ ನಿದಿಧ್ಯಾಸ್ಯ ವಿದ್ವಾನ್ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||2|| ಕರುಣಾಳುವೂ ಪರಮಶಾಂತಿಯುಳ್ಳಾತನೂ ಆಗಿರುವ ಬ್ರಹ್ಮನಿಷ್ಠನಾದ ಗುರುವನ್ನು ಸೇವಿಸಿ ಮಾಡಿದ ಮನನದಿಂದ ತನ್ನ ಸ್ವರೂಪವನ್ನು ಕುರಿತು ವಿಚಾರಮಾಡಿ ನಿದಿಧ್ಯಾಸನದಿಂದ ಜ್ಞಾನಿಯಾಗಿ ಯಾವ ತತ್ತ್ವವನ್ನು ಪಡೆದುಕೊಳ್ಳುತ್ತಾನೋ ಆ ನಿತ್ಯವಾದ ಪರಬ್ರಹ್ಮನೇ ನಾನಾಗಿರುವೆನು. ಯದಾನನ್ದರೂಪಂ ಪ್ರಕಾಶಸ್ವರೂಪಂ ನಿರಸ್ತಪ್ರಪಞ್ಚಂ ಪರಿಚ್ಛೇದಶೂನ್ಯಮ್ | ಅಹಂಬ್ರಹ್ಮವೃತ್ತ್ಯೈಕಗಮ್ಯಂ ತುರೀಯಂ ಪರಂ ಬ್ರಹ್ಮ ನಿತ್ಯಂ ತದೇವಾಹಮಸ್ಮಿ  ||3|| ಯಾವದು ಅನಂದಸ್ವರೂಪವಾಗಿಯೂ ಪ್ರಕಾಶರೂಪವಾಗಿಯೂ ಪ್ರಪಂಚರಹಿತವಾಗಿ ಯಾವ ಎಲ್ಲೆಕಟ್ಟೂ ಇಲ್ಲದೆ 'ನಾನು ಬ್ರಹ್ಮವು' ಎಂಬ ವ್ಯಕ್ತಿಯಿಂದಲೇ ಅರಿಯುವದಕ್ಕೆ ತಕ್ಕದ್ದಾಗಿರುವದೋ ಅವಸ್ಥಾತ್ರಯವನ್ನು ಮಿರಿದ ನ...

Kalyana Vrushti Sthavam - ಕಲ್ಯಾಣವೃಷ್ಟಿಸ್ತವಃ - Sri Adi Shankaracharya

ಕಲ್ಯಾಣವೃಷ್ಟಿಭಿರಿವಾಮೃತಪೂರಿತಾ ಭಿ | ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ || ಸೇವಾಭಿರಂಬ ತವ ಪಾದಸರೋಜ ಮೂಲೇ | ನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ||1|| *** ಅಮೃತ ಗುಣ ಸಂಪನ್ನಳಾದ, ಮಂಗಳಕಾರಿಣಿ ವಿಷ್ಣು ಪತ್ನಿ ಲಕ್ಷ್ಮಿಯೇ, ನಿನ್ನ ಪಾದ ಕಮಲದ ಸೇವೆ ಮಾಡುವುದು ಜನರ ಎಂತಹ ಭಾಗ್ಯವು ||1|| *** Kalyana vrushtibi rivamrutha poorithaabhi, Lakshmi swayam varana mangala deepikabhi, Sevabhirambha, thava pada saroja moole, Naakari kim manasi bhagyavatham jananaam.             1 *** Hey mother, Which wishes in their mind, Are not fulfilled of those lucky people, Who are able to serve near your lotus like feet, Which are the rains of luck full of nectar, And which are like the lamps lit during, The marriage of Goddess Lakshmi. ************ ಏತಾವದೇವ ಜನನಿ ಸ್ಪೃಹಣೇಯಮಾಸ್ತೇ | ತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ || ಸಾನ್ನಿಧ್ಯಮುದ್ಯದರುಣಾಯುತ ಸೋದರಸ್ಯ | ತ್ವದ್ವಿಗ್ರಹಸ್ಯ ಪರಯಾ ಸುಧಯಾ ಪ್ಲುತಸ್ಯ  ||2|| *** ಜಗದೇಕಮಾತೆ, ಅರ್ಶುಪೂರಿತ ನಯನಗಳಿಂದ ಸ್ಮರಣೀಯಳಾದ, ಅರುಣ ಪ್ರಭೆಯುಳ್ಳ ನಿನ್ನ ಸ್ವರೂಪದಿಂದ ನನಗೆ ಅಮೃತ ಸಿಂಚನವ...

ಶ್ರೀರಾಮಕರ್ಣಾಮೃತಮ್ (ಶ್ರೀಶಂಕರಾಚಾರ್ಯಕೃತ)

ಶ್ರೀರಾಮಃ ಸಕಲೇಶ್ವರೋ ಮಮ ಪಿತಾ ಮಾತಾ ಚ ಸೀತಾ ಮಮ ಭ್ರಾತಾ ಬ್ರಹ್ಮ ಸಖಾ ಪ್ರಭಂಜನಸುತಃ ಪತ್ನೀ ವಿರಕ್ತಿಃ ಪ್ರಿಯಾ | ವಿಶ್ವಾಮಿತ್ರವಿಭೀಷಣಾದಿವಶಗಾ ಮಿತ್ರಾಣಿ ಬೋಧಸ್ಸುತೋ ಭಕ್ತಿಃ ಶ್ರೀಹರಿಸಂಗತಾ ರತಿಸುಖಂ ವೈಕುಂಠಮಸ್ಮತ್ಪದಮ್ ||1||     ಎಲ್ಲರಿಗೂ ಒಡೆಯನಾದ ಶ್ರೀರಾಮನು ತನ್ನ ತಂದೆ, ಸೀತೆಯು ನನ್ನ ತಾಯಿ. ಬ್ರಹ್ಮನು ಸೋದರನು. ವಾಯುಪುತ್ರನಾದ(ಹನುಮಂತನು) ಸ್ನೇಹಿತನು. ವೈರಾಗ್ಯಳೆಂಬುವಳೇ ಪ್ರಿಯಳಾದ ಹೆಂತಿಯು. ವಿಶ್ವಾಮಿತ್ರ, ವಿಭೀಷಣರೇ ಮುಂತಾದ ಅನುಯಾಯಿಗಳೇ ನನ್ನ ಮಿತ್ರರು. ಜ್ಞಾನವೇ ಪುತ್ರನು. ಶ್ರೀಹರಿಯಲ್ಲಿ ಅನುರಕ್ತವಾದ ಭಕ್ತಿಯೇ ರತಿಸುಖವು, ವೈಕುಂಠವೇ ನಮ್ಮ ಊರು. ರಾಮಂ ಶ್ಯಾಮಾಭಿರಾಮಂ ರವಿಶಶಿನಯನಂ ಕೋಟಿಸೂರ್ಯಪ್ರಕಾಶಂ ದಿವ್ಯಂ ದಿವ್ಯಾಸ್ತ್ರಪಾಣಿಂ ಶರಮುಖಶರಧಿಂ ಚಾರುಕೋದಂಡಹಸ್ತಮ್ | ಕಾಲಂ ಕಾಲಾಗ್ನಿರುದ್ರಂ ರಿಪುಕುಲದಹನಂ ವಿಘ್ನವಿಚ್ಛೇದದಕ್ಷಂ ಭೀಮಂ ಭೀಮಾಟ್ಟಹಾಸಂ ಸಕಲಭಯಹರಂ ರಾಮಚಂದ್ರಂ ಭಜೇಹಮ್ ||2||         ಕಪ್ಪಾದ ದೇಹಕಾಂತಿಯುಳ್ಳ, ಸೂರ್ಯಚಂದ್ರರೇ ಕಣ್ಣಾಗಿ ಉಳ್ಳ, ಕೋಟಿ ಸೂರ್ಯರಂತೆ ಹೊಳೆಯುವ, ಪ್ರಕಾಶರೂಪನಾದ, ದಿವ್ಯವಾದ ಅಸ್ತ್ರಗಳನ್ನು ಹಿಡಿದಿರುವ, ಸಮುದ್ರದೋಪಾದಿಯ ಬಾಣಸಮೂಹವುಳ್ಳ, ಬಿಲ್ಲನ್ನು ಹಿಡಿದ ಸುಂದರವಾದ ಕೈಯುಳ್ಳ, (ರಾಕ್ಷಸರಿಗೆ) ಮೃತ್ಯುರೂಪನಾದ, ಕಾಲಾಗ್ನಿಯಂತೆ ಭಯಂಕರನಾದ, ಶತ್ರುಗಳ ಗುಂಪನ್ನು ಸುಡುವ, ಅಡ್ಡಿಗಳನ್ನು ತ...