ದೀಪಾವಳಿ-ಗೀತಾಜಯಂತಿ
ಪ್ರತಿವರ್ಷವೂ ಕಾರ್ತಿಕಮಾಸದಲ್ಲಿ ದೀಪಾವಳಿಯು ಬರುತ್ತದೆ. ಮಾರ್ಗಶೀರ ಮಾಸದಲ್ಲಿ ಗೀತಾಜಯಂತಿಯು ಬರುತ್ತದೆ. ದೀಪಾವಳಿಯನ್ನು ಬಹು ಮಟ್ಟಿಗೆ ಎಲ್ಲರೂ ಅನುಷ್ಠಿಸುತ್ತಾರೆ. ಆಗ್ಗೆ ಅಭ್ಯಂಗನಸ್ನಾನ, ಹೊಸಬಟ್ಟೆಗಳನ್ನು ಉಡುವದು, ಪಟಾಕಿಗಳನ್ನು ಸುಡುವದು, ಬಂಧು-ಮಿತ್ರರೊಡನೆ ಕಲೆತು ಮೃಷ್ಟಾನ್ನಭೋಜನಮಾಡುವದು ಮುಂತಾದವುಗಳನ್ನು ಜನರು ಆಚರಿಸುತ್ತಾರೆ, ಪತ್ರಿಕಾಪ್ರಪಂಚದವರು 'ವಿಶೇಷಾಂಕ'ಗಳನ್ನು ಹೊರಡಿಸಿ ಜನರನ್ನು ಆಕರ್ಷಿಸುತ್ತಾರೆ. ವಿದ್ಯುಚ್ಛಕ್ತಿಯ ವಿವಿಧವಾದ ದೀಫಗಳನ್ನು ಬೆಳಗಿಸಿ ಕೆಲವರು ತಮ್ಮ ಗೃಹಗಳನ್ನೂ ದೇವಾಲಯ- ಸಭಾಮಂದಿರಗಳನ್ನೂ ಅಲಂಕರಿಸುತ್ತಾರೆ. ಆದರೆ ಅನಂತರ ಪ್ರಾಪ್ತವಾಗುವ 'ಗೀತಾಜಯಂತಿ'ಯನ್ನು ಮಾತ್ರ ಎಲ್ಲಿಯೋ ಕೆಲವರು ನಡೆಯಿಸುತ್ತಾರೆ. ಜಹುಜನರಿಗೆ ಗೀತಾಜಯಂತಿ ಎಂಬ ಹಬ್ಬಮೊಂದಿದೆ ಎಂಬುದೇ ತಿಳಿದಿಲ್ಲ. ಪತ್ರಿಕೆಗಳವರು ಎಲ್ಲಾ ವಿಧವಾದ ಜಾಹಿರಾತುಗಳು, ಕಥೆಗಳು, ನಾಟಕ, ವಿಡಂಬನೆ, ರಾಜಕೀಯ, ವರ್ಷಬವಿಷ್ಯ, ಸಿನೆಮ-ಕ್ರೀಡಾಸುದ್ದಿಗಳು ಮುಂತಾದ ವಿಪುಲ ಸಾಹಿತ್ಯವನ್ನು ಪ್ರಕಟಿಸಿ ಪ್ರಚಾರಮಾಡುತ್ತಾರಾದರೂ 'ಯಾವ ವಿಶೇಷಸಂಚಿಕೆಯಲ್ಲೂ - ಅದು ಎಷ್ಟೇ ಗಾತ್ರದ್ದಿರಲಿ ಅರ್ಧ ಪುಟದಷ್ಟು ಕೂಡ ಗೀತೆಯ ವಿಚಾರಗಳಿರುವದಿಲ್ಲ ಅಧ್ಯಾತ್ಮವಿದ್ಯಾಪೀಠಗಳಾದ ಮಠಗಳಲ್ಲಿ ಕೂಡ ವಿನಾಯಕಚತುರ್ಥಿ, ಶಂಕರಜಯಂತಿ, ಶರನ್ನವರಾತ್ರಿ, ಮಧ್ವನವಮಿ, ತಿರುನಕ್ಷತ್ರಗಳಲ್ಲಿ ಉತ್ಸವಗಳು ನಡೆಯುವಂತೆ ಗೀತಾಜಯಂತಿ ಉತ್ಸವವು ವೈಭವದಿಂದ...