Posts

ರಥಸಪ್ತಮಿ

Image
    ಹಿಂದೂಗಳು ಆಚರಿಸುವ ಹಬ್ಬಗಳಲ್ಲಿ ಪ್ರತಿವರ್ಷವೂ ಚಾಂದ್ರಮಾನರೀತಿಯಾಗಿ ಮಾಘಶುಕ್ಲ ಸಪ್ತಮಿ ದಿನ ಆಚರಿಸುವ 'ರಥಸಪ್ತಮಿ' ಹಬ್ಬವು ಒಂದಾಗಿರುವರು. ಆ ದಿನ ನದಿಯಲ್ಲಿ ಸ್ನಾನಮಾಡುವಾಗ ಏಳು ಎಕ್ಕದ ಎಲೆಗಳನ್ನು ಮೈಮೇಲೆ ಧಿರಿಸಿ ನೀರಿನಲ್ಲಿ ಮುಳುಗಿ ಏಳುತ್ತಾರೆ. ಅನಂತರ ತುಳಸೀಕಟ್ಟೆಯ ಮುಂದೆ ರಂಗವಲ್ಲಿಯಿಂದ 'ರಥ'ವನ್ನು ಬರೆದು ಸೂರ್ಯನನ್ನು ಪೂಜಿಸುತ್ತಾರೆ. ದೇವಾಲಯಗಳಲ್ಲಿ ದೇವರಿಗೆ 'ಸೂರ್ಯಮಂಡಲೋತ್ಸವ'ವನ್ನು ನಡೆಯಿಸುತ್ತಾರೆ. ರಥಸಪ್ತಮಿ ದಿನ ನಡೆಯಬೇಕಾದ ವ್ರತವಿಧಾನವೂ ಕಥೆಯೂ ಪುರಾಣಗಳಲ್ಲಿವೆ. ಪದ್ಮಕಯೋಗವೆನಿಸಿದ ಈ ದಿನವು ಸಾವಿರಸೂರ್ಯಗ್ರಹಣಗಳಿಗೆ ಸಮವಾದ ಪುಣ್ಯ ಕಾಲವೆಂದೂ ವಿಶೇಷವಾಗಿ ಸೂರ್ಯನನ್ನು ಪೂಜಿಸಬೇಕೆಂದೂ ದೀಪಗಳನ್ನು ಬೆಳಗಿ ನದಿಯಲ್ಲಿ ಬಿಡಬೇಕೆಂದೂ ಮಕರಶುಕ್ಲಸಪ್ತಮಿಯೆನಿಸಿದ ಈ ದಿನವು ಸಕಲಪಾಪಗಳನ್ನೂ ಕಳೆಯುವ ಶಕ್ತಿಯುಳ್ಳದ್ದೆಂದೂ ಧರ್ಮಶಾಸ್ತ್ರಗಳಲ್ಲಿ ವಿವರಿಸಿದೆ. ಆದ್ದರಿಂದ ಈ ಹಬ್ಬದ ವಿಚಾರವಾಗಿ ಸ್ವಲ್ಪ ತಿಳಿಯೋಣ.     ವೇದೇತಿಹಾಸಪುರಾಣಗಳಲ್ಲಿ ಸೂರ್ಯನನ್ನು ಸ್ತುತಿಸುವ ಮಂತ್ರಗಳೂ, ಸೂಕ್ತಗಳೂ, ಸ್ತೋತ್ರಪಾಠಗಳೂ ವಿಪುಲವಾಗಿವೆ. ಮಾನವನಿಗೆ ಆರೋಗ್ಯವನ್ನು ಕೊಡುವವನೇ ಸೂರ್ಯನು. ಸೂರ್ಯನು ಎಲ್ಲಾ ಪ್ರಾಣಿವರ್ಗ, ಸಸ್ಯವರ್ಗ, ಮನುಷ್ಯ್ರು, ದೇವತೆಗಳಿಗೂ 'ಮಿತ್ರ'ನೆನಿಸಿದ್ದಾನೆ. ಆತನ ಬೆಳಕು, ಶಾಖಗಳಿಲ್ಲೆ ಜೀವನವೇ ಇಲ್ಲ. ಅವನೇ 'ಅನ್ನದಾತ'ನೆಂದೂ ಶಾಸ್ತ್ರಗಳಲ್...

ಮೂವತ್ತು ಭಾವಗೀತೆಗಳ ಪುಷ್ಪಮಾಲೆ

Image
ತೂಮಣಿ ಮಾಡುತ್ತು ಚುಟ್ರುಮ್ ವಿಳಕ್ಕೆರಿಯ ದೂಪಮ್ ಕಮಳ್ ತ್ತುಯಿಲಣೈ ಮೇಲ್ ಕಣ್ವಳರುಮ್ ಮಾಮಾನ್ ಮಗಳೇ ಮಣಿಕ್ಕದವಂ ತಾಳ್ ತೆರುವಾಯ್ ಮಾಮಿರ್ ಅವಳೈ ಎಳುಪ್ಪೀರೋ, ಉನ್ ಮಗಳ್ ತಾನ್ ಊಮೆಯೋ ಅನ್ರಿ ಚ್ಯೆವುಡೋ ಅನನ್ದಲೋ ಏಮಪ್ಪೆರುನ್ದುಯಿಲ್ ಮನ್ದಿರಪ್ಪಟ್ಟಾಳೋ ಮಾಮಾಯನ್ ಮಾದವನ್ ವೈಗುನ್ದ ನೆನ್ನೆನ್ರು ನಾಮಮ್ ಪಲವುಮ್ ನವಿನ್ರೇಲೋ ರೆಮ್ಬಾವಾಯ್     ಎಂತಹ ಸುಂದರವಾದ ವರ್ಣನೆ. ಒಳಗೆ ಮಾನವ ಮಗಳು ನಿದ್ರಿಸುತ್ತಿದ್ದಾಳೆ. ಆ ಗೃಹವಾದರೋ ಪರಿಶುದ್ಧವಾದ ಮಾಣಿಕ್ಯದಿಂದ ಕಟ್ಟಲ್ಪಟ್ಟಿದೆ. ಸುತ್ತಲೂ ದೀಪಗಳು ಉರಿಯುತ್ತಿವೆ. ಅಗರು, ಹಾಲು ಮಡ್ಡಿ ಮುಂತಾದ ಧೂಫ ಘಮಘಮಿಸುತ್ತಿದೆ. ಅವಳು ಹಂಸತೂಲಿಕಾಕಲ್ಪದಲ್ಲಿ ಮಲಗಿ ನಿದ್ರಿಸುತ್ತಿದ್ದಾಳೆ. ಹೊರಗಿನಿಂದ ಬಾಲೆಯರು ಅವಳನ್ನು ಎಬ್ಬಿಸುತ್ತಿದ್ದಾರೆ. "ಏಳು, ಮಾವನ ಮಗಳೇ, ಚಿಲಕವನ್ನು ತೆಗೆಯುವವಳಾಗು." ಉಹುಂ, ಶ್ರೀ ಕೃಷ್ಣಾನುಭಾವದ ರಸದಲ್ಲಿ ತಲ್ಲಿನಳಾಗಿರುವ ಅವಳು ಏಳುವುದಿಲ್ಲ. ಆಗ ಬಾಲೆಯರು ಅವಳ ತಾಯಿಗೆ ಹೇಳುತ್ತಾರೆ. 'ಅತ್ತೆಯವರೆ ನೀವಾದರೂ ಅವಳನ್ನು ಎಬ್ಬಿಸಿ. ಅವಳೇನು ಮೂಕಿಯೋ, ಕಿವುಡಿಯೋ ಅಥವಾ ಸೋಮಾರಿಯೋ ಕೇಳಿ ಯಾರಾದರೂ ಇವಳಿಗೆ ಮಂಕುಬೂದಿ ಚೆಲ್ಲಿದ್ದಾರೇನು? ಮಂತ್ರ ಮಗ್ಧಳನ್ನಾಗಿ ಮಾಡಿದ್ದಾರೇನು? ಅಥವಾ ಇವಳ ನೆರೆಮನೆಯಲ್ಲೇ ಶ್ರೀಕೃಷ್ಣನಿರುವುದರಿಂದ ರಾತ್ರಿಯೆಲ್ಲಾ, ಅವನು ಇವಳೊಡನಿದ್ದು ಈಗ ತಾನೇ ಎದ್ದು ಹೋಗಿರಬಹುದಾದ್ದರಿಂದ ಈಕೆ ಇನ್ನೂ ಅದೇ ತನ್ಮಯತೆಯಲ್ಲಿದ್ದಾಳೋ...

ಲಲಿತಾ ತ್ರಿಶತೀ ( ಏಕಾರಾದಿನಾಮ ) - 3. ಓಂ ಏಕಾನೇಕಾಕ್ಷರಾಕೃತಯೇ ನಮಃ

ಏಕ, ಮತ್ತು ಅನೇಕವಾದ ಅಕ್ಷರಗಳು ಅಜ್ಞಾನವಿಶೇಷಗಳು ಈಶ್ವರ ರೂಪವಾದ ಚೈತನ್ಯ ಪ್ರತಿ ಬಿಂಬಕ್ಕೆ ಉಪಾಧಿಯಾಗಿರುವ ಶುದ್ಧ ಸತ್ತ್ವ ಪ್ರಧಾನವಾದ ಅಜ್ಞಾನವು ಏಕಾಕ್ಷರವು, ಜೀವ ಪ್ರತಿಬಿಂಬೋಪಾಧಿ ರೂಪವಾಗಿರುವ ಮಲಿನ ಸತ್ತ್ವ ಪ್ರಧಾನವಾದ ಅಜ್ಞಾನಗಳು ಅನೇಕಾಕ್ಷ್ರಗಳು. "ಮಾಯಾ ಚಾವಿದ್ಯಾ ಚ ಸ್ವಯಮೇವ ಭವತಿ" ಎಂದು ಶ್ರುತಿಯಿಂದ ಜೀವೇಶ್ವ್ರ ಪ್ರತಿಬಿಂಬೋಪಾಧಿಗಳ ಭೇದವು ವ್ಯಕ್ತವಾಗುವುದು. ಇವು ಮಾಯಾ ಶಬ್ದದಿಂದ ಕರೆಯಲ್ಪಡುವುವೂ ಪ್ರಕೃತಿ ರೂಪಗಳೂ ಆಗಿವೆ. ಮಾಯಾಂತು ಪ್ರಕೃತಿಂ ಎಂಬ ಶ್ರುತಿಯು ಈ ಅರ್ಥದಲ್ಲಿ ಪ್ರಮಾಣವಾಗಿರುವುದು. ಆ ಅಕ್ಷರವೆಂಬ ಅಜ್ಞಾನಗಳಲ್ಲಿ ಚೈತನ್ಯವು ಪ್ರತಿಬಿಂಬ ಅಥವಾ ಅವಚ್ಛಿನ್ನ ರೂಪವನ್ನು ಹೊಂದುವುದು. ಗಡಿಗೆಯಲ್ಲಿರುವ ನೀರಿನಲ್ಲಿ ಆಕಾಶವು ಪ್ರತಿ ಬಿಂಬರೂಪ ಅಥವಾ ಅವಚ್ಛಿನ್ನರೂಪಗಳಿಂದ ಇರುವುದು. ಅದರಂತೆ ಇರುವ ಚೈತನ್ಯವುಳ್ಳವಳು ಅಥವಾ ಪ್ರಣವ ಮುಂತಾದುದು ಏಕಾಕ್ಷರವು. ಅಕಾರ ಮೊದಲುಗೊಂಡು ಕ್ಷಕಾರ ಪರ್ಯಂತವಿರುವ ವರ್ಣಗಳು ಅನೇಕಾಕ್ಷರಗಳು ಅಂತಹ ಎಲ್ಲ ವರ್ಣಗಳು ಸ್ವರೂಪವಾಗಿ ಉಳ್ಳವಳೂ "ಅಕಾರಾದಿ ಕ್ಷಕಾರಾಂತಾ ಮಾತೃಕೇತ್ಯಭಿಧೀಯತೇ" ಎಂಬ ವಚನದಿಂದ ವರ್ಣಗಳೆಲ್ಲವೂ ಮಾತೃಕಾ ರೂಪವಾದ್ದರಿಂದ ಮಾತೃಕಾಕಾರವುಳ್ಳವಳೂ ಎಂದು ಅರ್ಥವು ಅಥವಾ "ಏ" + "ಕ" ಎಂಬ ಎರಡು ವರ್ಣಗಳು, ಮಿಕ್ಕ ಅನೇಕಾಕ್ಷರಗಳು ಸೇರಿ ಹದಿನೈದು ವರ್ಣಸ್ವರೂಪವಾದ ಮಂತ್ರದ ಆಕೃತಿಯುಳ್ಳವಳು. ಅಥವಾ ಏಕಭೂತವಾಗಿ ಅ...

ಧಾತ್ರೀಹವನದ ವೈಶಿಷ್ಟ್ಯ

Image
   ಅಭ್ಯುದಯಕ್ಕಾಗಿ ಮಾನವನು ಪ್ರಕೃತಿಮಾತೆಗೆ ಸಲ್ಲಿಸುವ ಧಾತ್ರೀಹವನವು ಕಾರ್ತಿಕಮಾಸದಲ್ಲಿ ಆಚರಿಸಲ್ಪಡುತ್ತದೆ. ಈ ಸಮಯವನ್ನು 'ಕೌಮುದೀ ಮಹೋತ್ಸವ' ಕಾಲವೆಂದೂ ಕರೆಯುತ್ತಾರೆ. ಕು - ಎಂದರೆ ಭೂಮಿ, ಮುದ್ - ಎಂದರೆ ಸಂತೋಷ. ಪೈರು-ಫಸಲುಗಳು ಕೈಗೆ ಬಂದಾಗ ಉತ್ತು ಬಿತ್ತಿದ ರೈತನು ಹಿಗ್ಗಿನ ಬುಗ್ಗೆಯಾಗಿ ಕಾರ್ತಿಕದೀಪವನ್ನು ಬೆಳಗಿ ಹಬ್ಬಗಳನ್ನು ಆಚರಿಸುತ್ತಾನೆ. ದೀಪಾವಳಿ, ಬಲಿಪಾಡ್ಯಮಿ, ತುಳಸೀಹುಣ್ಣಿಮೆ - ಇವೇ ಆ ಹಬ್ಬಗಳು.     ಪುಣ್ಯತಮವಾದ ಕಾರ್ತಿಕಮಾಸದಲ್ಲಿ ಅಭಕ್ಷ್ಯಭಕ್ಷಣ, ಅಪೇಯಪಾನ ಮುಂತಾದ ದೋಷಗಳ ನಿವಾರಣೆಗಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮತ್ತು ಭೂಮಿಯನ್ನು ಅಗೆಯುವದು, ಕಡಿಯುವದು, ತುಳಿಯುವದೇ ಮುಂತಾದ ನಿರಂತರವಾದ ಹಿಂಸೆಯನ್ನು ಸಹಿಸಿಕೊಂಡು ನಮಗೆ ಸುಜಲ-ಸುಫಲಗಳನ್ನಿತ್ತು ರಕ್ಷಿಸಿ ಸಸ್ಯ ಶ್ಯಾಮಲೆಯಾಗಿ ಕಂಗೊಳಿಸುವ ಭೂಮಾತೆಯಲ್ಲಿ ಕ್ಷಮಾಯಾಚನೆಗಾಗಿ, ಹಾಗೂ ಕಾರ್ತಿಕದಾಮೋದರನ ಪ್ರೀತಿಗಾಗಿ ಸಮಸ್ತ ಪ್ರಕೃತಿಯ ಸಂಕೇತವಾದ ನೆಲ್ಲಿಯಮರದ ಬುಡದಲ್ಲಿ ಮಾಡುವ ಪೂಜಾ-ಹೋಮಗಳೇ ಧಾತ್ರಿಹವನವೆನಿಸುವದು. ಭೂಮಾತೆದಯಾಪಾಲಿಸಿದ ಪೈರನ್ನು ನಾವು ಉಪಯೋಗಿಸುವ ಮುಂಚೆ "ಕೆರೆಯ ನೀರನ್ನು ಕೆರೆಗೆ ಚೆಲ್ಲಿ" ಎಂಬ ದಾಸವಾಣಿಯಂತೆ ಅಲ್ಪಭಾಗವನ್ನಾದ್ರೂ ಭಗವಂತನಿಗೆ ಅರ್ಪಿಸಿ ಕೃತಾರ್ಥರಾಗುವ ಸಂದರ್ಭವೇ ಈ ಧಾತ್ರಿಯ ಆರಾಧನೆಯಾಗಿದೆ. ಅಲ್ಲದೆ ಪೈರನ್ನು ಕೊಯ್ಯುವ, ಕುಟ್ಟುವ, ಒಕ್ಕಲಿಕ್ಕುವ, ಬೇಯಿಸುವ, ಅರೆಯುವದೇ ಮುಂತಾದ...

ಲಲಿತಾ ತ್ರಿಶತೀ ( ಏಕಾರಾದಿನಾಮ ) - 2. ಓಂ ಏಕಾಕ್ಷರ್ಯೈ ನಮಃ

ಮುಖ್ಯವಾದ ಅಕ್ಷರ ಅಥವಾ ಮಾಯೆಯೆಂಬ ಉಪಾಧಿಯುಳ್ಳವಳು. ಮಾಯೆಯು ಈಶ್ವ್ರನಿಗೆ ಉಪಾಧಿಯಾಗಿ ಪ್ರತಿಬಿಂಬದಲ್ಲಿ ಸರ್ವಜ್ಞತ್ವ ಮುಂತಾದ ವಿಶೇಷಗಳನ್ನು ಉಂಟುಮಾಡುವುದು. ಅಂತಹ ಮಾಯೆಯು ಆತ್ಮ ಜ್ಞಾನದಿಂದ ಮುಕ್ತಿಯು ಲಭಿಸುವವರೆಗೂ ನಾಶವಾಗದಿರುವುದರಿಂದ ಕೂಟಸ್ಥವೆಂಬ ಅರ್ಥವನ್ನು ಬೋಧಿಸುವ ಅಕ್ಷ್ರ ಶಬ್ದದಿಂದ ಕರೆಯಲ್ಪಡುವುದು ಅಥವಾ ಓಂಕಾರವೆಂಬ ಏಕಾಕ್ಷರವುಳ್ಳವಳು ಸಕಲ ಶಬ್ದಗಳಿಗೂ ಶಬ್ದಗಳ ಮೂಲಕ ಅರ್ಥಗಳಿಗೂ ಪ್ರಕೃತಿಯು ಓಂಕಾರವು ಇದನ್ನು ಪ್ರತ್ಯೇಕವಾಗಿ ಅವಲಂಬಿಸಿ ಪರ-ಅಪರ ಬ್ರಹ್ಮವಸ್ತುವನ್ನು ಉಪಾಸನೆ ಮಾಡಿ ಪರಾಪರ ಬ್ರಹ್ಮತಾದಾತ್ಮ್ಯವನ್ನು ಹೊಂದಬಹುದು. ಆದ್ದರಿಂದ ದೇವಿಯು ಶಬ್ದಬ್ರಹ್ಮರೂಪವಾದ ಪ್ರಣವಾಕ್ಷರವುಳ್ಳವಳು ಅಥವಾ, ಅಖಂಡಾನಂದ ಚೈತನ್ಯರೂಪನಾದ, ಅನಶ್ವರನಾದ ಪರಮೇಶ್ವ್ರನು ಅರ್ಧ ಶರೀರ ಭಾಗದಲ್ಲಿರುವಳು ಅಥವಾ ಮಾಯಾಬೀಜ ಮುಂತಾದ ವರ್ಣಗಳನ್ನು ಉಪಾಸನಾ ಪ್ರತೀಕವನ್ನಾಗಿ ಹೊಂದಿರುವವಳು ಅಥವಾ ಅಖಂಡಾಕಾರವಾದ ವೃತ್ತಿಯಲ್ಲಿ ಚೈತನ್ಯವು ಪ್ರತಿಬಿಂಬಿಸುವುದರಿಂದ ಅಂತಹ ವೃತ್ತಿವ್ಯಾಪ್ತಿ ಮಾತ್ರ ವಿವಕ್ಷೆಯಿಂದ ಅಕ್ಷರ ಪದದ ಅರ್ಥವಾದ ಚೈತನ್ಯಕ್ಕೆ ವಿಷಯಳಾಗುವವಳು. "ಅಥಪರಾ ಯಯಾ ತದಕ್ಷ್ರಮಧಿಗಮ್ಯತೇ" ಎಂಬ ಶ್ರುತಿಯು ವೃತ್ತಿ ವ್ಯಾಪ್ತಿಯನ್ನು ಅಕ್ಷರ ರೂಪ ಪರಬ್ರಹ್ಮ ವಸ್ತುವಿನಲ್ಲಿ ವರ್ಣಿಸುವುದು. ಸುಗುಣ ಬ್ರಹ್ಮ ವಸ್ತುವಿನಲ್ಲಿರುವ ವಿಶೇಷಣ ಧರ್ಮಗಳು ನಿರ್ಗುಣ ಬ್ರಹ್ಮ ವಸ್ತುವಿನಲ್ಲಿಯೂ ಕಲ್ಪಿತವಾಗಿ ಸಂಸಕ್ತವಾಗುವುವು ಎಂಬುದನ...

ಲಲಿತಾ ತ್ರಿಶತೀ (ಏಕಾರಾದಿನಾಮ) - 1. ಓಂ ಏಕಾರರೂಪಾಯೈ ನಮಃ

Image
ಮಂತ್ರದಲ್ಲಿ ದ್ವಿತೀಯಾಕ್ಷರವಾಗಿದ್ದು ಮಂತ್ರ ಶರೀರಳಾದ ದೇವಿಯನ್ನು ಭೋಧಿಸುವುದರಿಂದ ದೇವಿಯು ಏಕಾರವೆಂಬ ರೂಪವುಳ್ಳವಳು. ಏಕಾರಃ ರೂಪಂ ಯಸ್ಯಾಃ ಎಂದು ವಿಗ್ರಹವು

ಲಲಿತಾ ತ್ರಿಶತೀ -20 ಓಂ ಕರ್ಮಫಲಪ್ರದಾಯೈ ನಮಃ

Image
ಕಾಲಾಂತರದಲ್ಲಿ ಉಂಟಾಗುವ ಫಲಗಳಿಂದ ಕೂಡಿದ ಸತ್ಕರ್ಮಗಳ ಫಲವನ್ನು ಅನುಗ್ರಹಿಸುವಳು. ಅದೃಷ್ಟವು ಕರ್ಮಫಲವನ್ನು ಕೊಡುವುದೆಂದು ಕರ್ಮ ಮಿಮಾಂಸಾ ಶಾಸ್ತ್ರಕಾರ್ರ ಸಿದ್ಧಾಂತವು. ಅದು ಸಮಂಜಸವಾಗಲಾರದು. ಅಚೇತನವೂ ಜಡವೂ ಆದ ಅದೃಷ್ಟಕ್ಕೆ ಚೇತನ ಧರ್ಮವಾದ ಕರ್ಮಫಲದಾನ ಶಕ್ತಿಯು ಸಂಭವಿಸುವುದಿಲ್ಲ. ಶಾಸ್ತ್ರ ಪ್ರಮಿತವಾದ ಕರ್ಮಗಳು ಫಲವನ್ನು ಅವಶ್ಯವಾಗಿ ಕೊಡಬೇಕಾದುದರಿಂದ ಕರ್ಮಾಧ್ಯಕ್ಷಳಾದ ಪರದೇವತೆಯನ್ನು ಅಪೇಕ್ಷಿಸುವುದು. ಪರದೇವತೆಯು ಕರ್ಮಫಲವನ್ನು ಕೊಡುವುದೆಂಬುದನ್ನು  "ಕರ್ಮಾಧ್ಯಕ್ಷಃ"  "ಮಯೈವ ವಿಹಿತಾನ್ ಹಿ ತಾನ್" "ಫಲಮತ ಉಪಪತ್ತೇಃ" ಎಂಬ ಶ್ರುತಿ, ಸ್ಮೃತಿ, ನ್ಯಾಯಗಳು ಸಾರಿ ಹೇಳುವುವು ಆದ್ದರಿಂದ ದೇವಿಯು ಕರ್ಮ ಫಲ ಪ್ರದಾನ ಮಾಡುವವಳು. ಕರ್ಮಣಾಂ ಫಲಂ ಪ್ರದದಾತಿ ಎಂದು ವಿಗ್ರಹವು. ( ಮುಂದುವರೆಯುವುದು...)